Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:8 - ಪರಿಶುದ್ದ ಬೈಬಲ್‌

8 “ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭೆಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:8
31 ತಿಳಿವುಗಳ ಹೋಲಿಕೆ  

ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.


ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು.


ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.


ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.


ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.


ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು; ಅರಣ್ಯದಲ್ಲಿ ನದಿಯು ಹರಿಯತೊಡಗಿತು!


ಯಾಕೆಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು.


ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.


ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.


ಯಾಜಕರ ತುತ್ತೂರಿ ಧ್ವನಿಯನ್ನು ಕೇಳಿದಾಗ ಜನರು ಆರ್ಭಟಿಸಬೇಕು. ಆಗ ನಗರದ ಗೋಡೆಗಳು ಬೀಳುವವು; ಆಗ ನೀವು ನೇರವಾಗಿ ನಗರದೊಳಗೆ ಹೋಗಿರಿ” ಅಂದನು.


ಪ್ರಧಾನರು ಈ ಬಾವಿಯನ್ನು ತೋಡಿದರು. ಪ್ರಮುಖ ನಾಯಕರು ಈ ಬಾವಿಯನ್ನು ತೋಡಿದರು. ಅವರು ತಮ್ಮ ದೊಣ್ಣೆಗಳಿಂದ ಮತ್ತು ಕೋಲುಗಳಿಂದ ಈ ಬಾವಿಯನ್ನು ಅಗೆದರು.” ಆಮೇಲೆ ಜನರು “ಮತ್ತಾನ” ಎಂಬ ಮರುಭೂಮಿಯಿಂದ ಹೊರಟರು.


ಆರ್ ವಸತಿ ಪ್ರದೇಶಕ್ಕೆ ನಡೆಸುವ ಮೋವಾಬಿನ ಗಡಿಯ ಉದ್ದಕ್ಕೂ ಇರುವ ಕಣಿವೆಗಳನ್ನು ದಾಟಿದ್ದಾಯಿತು” ಎಂದು ಬರೆದಿದೆ.


ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.


ಆದ್ದರಿಂದ ಮೋಶೆ ಯೆಹೋಶುವನಿಗೆ, “ಕೆಲವು ಪುರುಷರನ್ನು ಆರಿಸಿಕೊಂಡು, ನಾಳೆ ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ಬೆಟ್ಟದ ತುದಿಯಲ್ಲಿ ನಿಂತು ಗಮನಿಸುವೆನು, ದೇವರು ನನಗೆ ಕೊಟ್ಟ ಊರುಗೋಲನ್ನು ನಾನು ಹಿಡಿದುಕೊಂಡಿರುವೆನು” ಎಂದು ಹೇಳಿದನು.


ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು.


ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಆರೋನರು ಮಾಡಿದರು. ಆರೋನನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ಕೋಲನ್ನು ಎತ್ತಿ ನೈಲ್ ನದಿಯ ನೀರನ್ನು ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.


ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು.


ಯೆಹೋವನು ಮೋಶೆಗೆ, “ನಿನ್ನ ಕೈಯಲ್ಲಿರುವುದೇನು?” ಅಂದನು. ಮೋಶೆ, “ಊರುಗೋಲು” ಎಂದು ಉತ್ತರಿಸಿದನು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಆಗ ಯೆಹೋವನು ಮೋಶೆಯೊಡನೆ ಮಾತಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು