Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:2 - ಪರಿಶುದ್ದ ಬೈಬಲ್‌

2 ಇಸ್ರೇಲರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರು ಸರ್ವೇಶ್ವರನಿಗೆ ಹರಕೆ ಮಾಡಿಕೊಂಡರು: “ನಾವು ಈ ಜನರನ್ನು ಜಯಿಸುವಂತೆ ಅನುಗ್ರಹಿಸಿದರೆ ಅವರ ಗ್ರಾಮಗಳನ್ನು ಪೂರ್ಣ ಹಾಳುಮಾಡಿ ಸರ್ವೇಶ್ವರನಾದ ನಿಮಗಾಗಿಯೇ ಮೀಸಲಿಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು - ನಾವು ಈ ಜನವನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:2
15 ತಿಳಿವುಗಳ ಹೋಲಿಕೆ  

ಯೆಫ್ತಾಹನು ಯೆಹೋವನಿಗೆ, “ನಾನು ಅಮ್ಮೋನಿಯರನ್ನು ಸೋಲಿಸುವಂತೆ ನೀನು ಮಾಡಿದರೆ


ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,


ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು; ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು.


ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.


ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ.


ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


“ಆದರೆ ನಿಮಗೆ ವಾಗ್ದಾನ ಮಾಡಿದ ದೇಶದ ಪಟ್ಟಣಗಳನ್ನು ಸ್ವಾಧೀನ ಮಾಡುವಾಗ ನೀವು ಪಟ್ಟಣದಲ್ಲಿರುವವರೆಲ್ಲರನ್ನು ಕೊಲ್ಲಬೇಕು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.


ನೀವು ಆ ಪಟ್ಟಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಪಟ್ಟಣದ ಮಧ್ಯದಲ್ಲಿ ತಂದುಹಾಕಿ ಅದಕ್ಕೆ ಬೆಂಕಿಹೊತ್ತಿಸಿ ಇಡೀ ಪಟ್ಟಣವನ್ನು ಬೆಂಕಿಯಿಂದ ಸುಡಬೇಕು. ಇದು ದೇವರಾದ ಯೆಹೋವನಿಗೆ ಸರ್ವಾಂಗಹೋಮವಾಗುವುದು. ಆ ಪಟ್ಟಣವು ಕಲ್ಲುಗಳ ರಾಶಿಯಾಗಿ ಪರಿಣಮಿಸುವುದು ಮತ್ತು ಯಾರೂ ಆ ಪಟ್ಟಣವನ್ನು ಮತ್ತೆ ಕಟ್ಟಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು