Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:4 - ಪರಿಶುದ್ದ ಬೈಬಲ್‌

4 ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡುಹೋಗುವದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುತ್ತಿರಲು ಮಾರ್ಗಾಯಾಸದಿಂದ ಅವರಿಗೆ ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:4
14 ತಿಳಿವುಗಳ ಹೋಲಿಕೆ  

ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ.


“ತರುವಾಯ ಇಸ್ರೇಲರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್ ಮತ್ತು ಮೋವಾಬ್ ದೇಶಗಳ ಮೇರೆಗಳನ್ನು ಸುತ್ತಿ ಬಂದರು. ಇಸ್ರೇಲರು ಮೋವಾಬ್ ದೇಶದ ಪೂರ್ವದಿಕ್ಕಿಗೆ ಪ್ರಯಾಣಮಾಡಿ ಅರ್ನೋನ್ ನದಿಯ ಆಚೆಯ ದಡದಲ್ಲಿ ಇಳಿದುಕೊಂಡರು. ಅವರು ಮೋವಾಬ್ ದೇಶದ ಮೇರೆಯನ್ನು ದಾಟಲಿಲ್ಲ. (ಅರ್ನೋನ್ ನದಿಯು ಮೋವಾಬ್ ದೇಶದ ಮೇರೆಯಾಗಿತ್ತು.)


ಯೆಹೋವನು ಇಸ್ರೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಯಾಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.


ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರೇಲರು ತಮಗೆ ಯೆಹೋವನು ವಾಗ್ದಾನ ಮಾಡಿದ್ದ ದೇಶಕ್ಕೆ ಹೋಗಲೇ ಇಲ್ಲ.


ಆದರೆ ನೀವು ಹಿಂತಿರುಗಿ ಕೆಂಪುಸಮುದ್ರಕ್ಕೆ ಹೋಗುವ ಮರುಭೂಮಿಯ ಮಾರ್ಗದಲ್ಲಿ ಹೋಗಬೇಕು.’


ಮೋಶೆಯು ಯೆಹೋವನ ಅಪ್ಪಣೆಗೆ ವಿಧೇಯನಾದನು. ಮೋಶೆ, ಆರೋನ ಮತ್ತು ಎಲ್ಲಾಜಾರ ಇವರು ಹೋರ್ ಬೆಟ್ಟವನ್ನು ಹತ್ತಿದರು. ಅವರು ಹೋಗುತ್ತಿರುವುದನ್ನು ಇಸ್ರೇಲರೆಲ್ಲರೂ ನೋಡಿದರು.


ಅಮಾಲೇಕ್ಯರೂ ಕಾನಾನ್ಯರೂ ಆ ಕಣಿವೆಯಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಕೆಂಪುಸಮುದ್ರಕ್ಕೆ ಹೋಗುವ ದಾರಿಯ ಮೂಲಕ ಮರುಭೂಮಿಗೆ ಮರಳಿ ಪ್ರಯಾಣ ಮಾಡಬೇಕು” ಎಂದು ಹೇಳಿದನು.


“ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.


ಯೆಹೋಷಾಫಾಟನು ಯೋರಾಮನನ್ನು, “ನಾವು ಯಾವ ಮಾರ್ಗದಲ್ಲಿ ಹೋಗೋಣ?” ಎಂದು ಕೇಳಿದನು. “ನಾವು ಎದೋಮಿನ ಮರಳುಗಾಡಿನ ಮೂಲಕ ಹೋಗೋಣ” ಎಂದು ಯೋರಾಮನು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು