Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:31 - ಪರಿಶುದ್ದ ಬೈಬಲ್‌

31 ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವದನ್ನು ಅವನು ಕಂಡಾಗ ಅಡ್ಡಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:31
14 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ಹಾಗರಳಿಗೆ ಒಂದು ಬಾವಿ ಕಾಣಿಸುವಂತೆ ಮಾಡಿದನು. ಹಾಗರಳು ಬಾವಿಗೆ ಹೋಗಿ ತನ್ನ ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಬಂದು ಮಗುವಿಗೆ ಕುಡಿಸಿದಳು.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಆಗ ಅವರು ಯೇಸುವನ್ನು ಗುರುತಿಸಿದರು. ಆದರೆ ಆತನೇ ಯೇಸುವೆಂದು ಅವರು ತಿಳಿದಾಕ್ಷಣವೇ ಆತನು ಅವರ ಕಣ್ಣಿಗೆ ಮಾಯವಾದನು.


(ಆದರೆ ಅವರಿಗೆ ಆತನ ಗುರುತು ಸಿಕ್ಕಲಿಲ್ಲ.)


ಆತನು, “ನಾನೇ ಯೇಸು” ಎಂದಾಗ ಅವರು ಹಿಂದೆ ಸರಿದು ನೆಲದ ಮೇಲೆ ಬಿದ್ದರು.


ಯೆಹೋವನೇ, ಅವರಿಗೆ ಭಯಹುಟ್ಟಿಸು; ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ.


ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.


ನಾನು ದೇವರ ಮುಂದೆ ಅಡ್ಡಬೀಳುತ್ತೇನೆ, ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ. ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ. ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ. ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು ನಾನು ನೋಡುತ್ತಿದ್ದೇನೆ.


ನಾನು ಈ ಸಂದೇಶವನ್ನು ದೇವರಿಂದ ಕೇಳಿದೆನು. ಸರ್ವಶಕ್ತನಾದ ದೇವರು ತೋರಿಸಿದವುಗಳನ್ನು ನೋಡಿದೆನು. ನಾನು ಸ್ಪಷ್ಟವಾಗಿ ನೋಡುವುದನ್ನು ದೀನತೆಯಿಂದ ತಿಳಿಸುತ್ತೇನೆ.


ಕೂಡಲೆ ಮೋಶೆಯು ನೆಲದ ಮೇಲೆ ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದನು.


ಅದಕ್ಕೆ ಕತ್ತೆಯು ಬಿಳಾಮನಿಗೆ, “ನೋಡು, ನಾನು ನಿನ್ನ ಸ್ವಂತ ಕತ್ತೆ. ಅನೇಕಾನೇಕ ವರ್ಷಗಳಿಂದ ನೀನು ನನ್ನ ಮೇಲೆ ಸವಾರಿ ಮಾಡುತ್ತಿರುವೆ. ನಾನು ಹಿಂದೆಂದೂ ಹೀಗೆ ಮಾಡಲಿಲ್ಲವೆಂದು ನಿನಗೆ ತಿಳಿದದೆ” ಎಂದು ಹೇಳಿತು. ಅದಕ್ಕೆ ಬಿಳಾಮನು, “ಅದು ನಿಜ” ಅಂದನು.


ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.


ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು