Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:32 - ಪರಿಶುದ್ದ ಬೈಬಲ್‌

32 ಯೆಹೋವನ ದೂತನು ಬಿಳಾಮನಿಗೆ, “ನೀನು ಮೂರು ಸಲವೂ ಕತ್ತೆಯನ್ನು ಹೊಡೆದದ್ದೇಕೆ? ನಿನ್ನ ಪ್ರಯಾಣವು ನನ್ನ ಚಿತ್ತಕ್ಕೆ ವಿರುದ್ಧವಾದದ್ದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆಗ ಸರ್ವೇಶ್ವರನ ದೂತ, “ಮೂರು ಸಾರಿ ನಿನ್ನ ಕತ್ತೆಯನ್ನೇಕೆ ಹೊಡೆದೆ? ನೀನು ಹಿಡಿದ ಮಾರ್ಗ ಸರಿಯಲ್ಲ. ನಿನ್ನನ್ನು ತಡೆಗಟ್ಟಲು ನಾನೇ ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೆಹೋವನ ದೂತನು - ನೀನು ಮೂರು ಸಾರಿಗೂ ನಿನ್ನ ಕತ್ತೆಯನ್ನು ಹೊಡೆದದ್ದೇಕೆ; ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದದ್ದರಿಂದ ನಿನ್ನನ್ನು ತಡೆಯುವದಕ್ಕೆ ನಾನೇ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:32
19 ತಿಳಿವುಗಳ ಹೋಲಿಕೆ  

ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ!


ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೋ ಇದ್ದಕ್ಕಿದ್ದಂತೆ ಹಾಳಾಗುವನು.


ಬಿಳಾಮನು ಕತ್ತೆಯ ಮೇಲೆ ಸವಾರಿ ಮಾಡುತ್ತಿದ್ದನು. ಅವನ ಜೊತೆ ಇಬ್ಬರು ಆಳುಗಳಿದ್ದರು. ಬಿಳಾಮನು ಪ್ರಯಾಣ ಮಾಡತೊಡಗಿದ್ದರಿಂದ ದೇವರು ಕೋಪಗೊಂಡನು. ಆದ್ದರಿಂದ ಯೆಹೋವನ ದೂತನು ಬಿಳಾಮನನ್ನು ತಡೆಯಲು ದಾರಿಯಲ್ಲಿ ನಿಂತುಕೊಂಡನು.


ಮೋಸದಿಂದ ಐಶ್ವರ್ಯವಂತರಾಗುವುದಕ್ಕಿಂತ ಯಥಾರ್ಥವಾಗಿದ್ದು ಬಡವರಾಗಿರುವುದೇ ಮೇಲು.


ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.


ದೇವರು ಪ್ರಾಣಿಗಳಿಗೂ ಪಕ್ಷಿಯ ಮರಿಗಳಿಗೂ ಆಹಾರ ಕೊಡುವನು.


ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.


ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.


“ಕಣವನ್ನು ತುಳಿಯಲು ಎತ್ತುಗಳನ್ನು ಉಪಯೋಗಿಸುವಾಗ ಅವುಗಳು ಧಾನ್ಯ ತಿನ್ನುತ್ತವೆ ಎಂದು ಅವುಗಳ ಬಾಯಿಗಳನ್ನು ಕಟ್ಟಬಾರದು.


ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.


ಆಗ ಯೆಹೋವನ ದೂತನು ಬಿಳಾಮನಿಗೆ, “ಆ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಆದ್ದರಿಂದ ಬಿಳಾಮನು ಬಾಲಾಕನ ನಾಯಕರೊಡನೆ ಹೋದನು.


ಆಗ ಯೆಹೋವನು ಆ ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟನು. ಅದು ಬಿಳಾಮನಿಗೆ, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ?” ಎಂದು ಕೇಳಿತು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಈ ಜನರು ನಿನ್ನನ್ನು ತಮ್ಮೊಡನೆ ಬರಬೇಕೆಂದು ಆಹ್ವಾನಿಸಲು ಬಂದಿದ್ದಾರೆ. ಆದ್ದರಿಂದ ನೀನು ಅವರೊಂದಿಗೆ ಹೋಗಬಹುದು. ಆದರೆ ನಾನು ಹೇಳುವುದನ್ನು ಮಾತ್ರ ಮಾಡು” ಎಂದು ಹೇಳಿದನು.


ಆ ಕತ್ತೆ ನನ್ನನ್ನು ನೋಡಿ ಮೂರು ಸಲ ನನ್ನೆದುರಿನಿಂದ ಇನ್ನೊಂದು ಕಡೆಗೆ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದಲ್ಲಿ ನಾನು ಕತ್ತೆಯನ್ನು ಉಳಿಸಿ ನಿನ್ನನ್ನು ಆಗಲೇ ಕೊಂದುಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.


ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು