Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:36 - ಪರಿಶುದ್ದ ಬೈಬಲ್‌

36 ಬಿಳಾಮನು ಬರುತ್ತಿರುವ ಸುದ್ದಿಯನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಸರಹದ್ದಿನಲ್ಲಿ ಅರ್ನೋನ್ ನದಿಯ ಬಳಿಯಲ್ಲಿರುವ ಮೋವ್ಯಾಬರ ಊರಿನಲ್ಲಿ ಅವನನ್ನು ಭೇಟಿಯಾಗಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಬಿಳಾಮನು ಬಂದ ಸಮಾಚಾರ ಬಾಲಾಕನಿಗೆ ಮುಟ್ಟಿತು. ಅವನು ಬಿಳಾಮನನ್ನು ಬರಮಾಡಿಕೊಳ್ಳಲು ತನ್ನ ನಾಡಗಡಿಯಾದ ಅರ್ನೋನ್ ಹೊಳೆಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವದಕ್ಕಾಗಿ ತನ್ನ ದೇಶದ ಮೇರೆಯಾದ ಅರ್ನೋನ್ ಹೊಳೆಯ ತೀರದಲ್ಲಿ ಇರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:36
14 ತಿಳಿವುಗಳ ಹೋಲಿಕೆ  

ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ಮತ್ತು “ತ್ರಿಛತ್ರ” ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.


“ಮೋವಾಬು ಹಾಳಾಗುವುದು; ಅದು ನಾಚಿಕೆಪಡುವುದು. ಮೋವಾಬು ಸತತವಾಗಿ ಗೋಳಾಡುವುದು. ಮೋವಾಬು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.


ಮೋವಾಬಿನ ಸ್ತ್ರೀಯರು ಅರ್ನೋನ್ ಹೊಳೆಯನ್ನು ದಾಟಲು ಪ್ರಯತ್ನಿಸುವರು. ಅವರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಹಾಯಕ್ಕಾಗಿ ಓಡುವರು. ಗೂಡಿನಿಂದ ಕೆಳಗೆ ಬಿದ್ದ ಪಕ್ಷಿಮರಿಗಳಂತೆ ಅವರಿರುವರು.


“ತರುವಾಯ ಇಸ್ರೇಲರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್ ಮತ್ತು ಮೋವಾಬ್ ದೇಶಗಳ ಮೇರೆಗಳನ್ನು ಸುತ್ತಿ ಬಂದರು. ಇಸ್ರೇಲರು ಮೋವಾಬ್ ದೇಶದ ಪೂರ್ವದಿಕ್ಕಿಗೆ ಪ್ರಯಾಣಮಾಡಿ ಅರ್ನೋನ್ ನದಿಯ ಆಚೆಯ ದಡದಲ್ಲಿ ಇಳಿದುಕೊಂಡರು. ಅವರು ಮೋವಾಬ್ ದೇಶದ ಮೇರೆಯನ್ನು ದಾಟಲಿಲ್ಲ. (ಅರ್ನೋನ್ ನದಿಯು ಮೋವಾಬ್ ದೇಶದ ಮೇರೆಯಾಗಿತ್ತು.)


“ಈ ರೀತಿಯಾಗಿ ನಾವು, ಇಬ್ಬರು ಅಮೋರಿಯ ಅರಸರ ದೇಶಗಳನ್ನು ಸ್ವಾಧೀನ ಮಾಡಿಕೊಂಡೆವು. ಅವರ ದೇಶಗಳು ಜೋರ್ಡನ್ ನದಿಯ ಪೂರ್ವದಲ್ಲಿದ್ದು ಅರ್ನೋನ್ ಕಣಿವೆಯಿಂದ ಹಿಡಿದು, ಹೆರ್ಮೋನ್ ಪರ್ವತದ ತನಕ ವಿಸ್ತಾರವಾಗಿತ್ತು.


“ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಆದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ.


ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.


ತನ್ನ ತಂದೆಯು ಸಮೀಪಿಸುತ್ತಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ತಂದೆಯಾದ ಇಸ್ರೇಲನನ್ನು ಗೋಷೆನಿನಲ್ಲಿ ಭೇಟಿಯಾಗಲು ತನ್ನ ರಥವನ್ನು ಸಿದ್ಧಪಡಿಸಿಕೊಂಡು ಹೋದನು. ಯೋಸೇಫನು ತನ್ನ ತಂದೆಯನ್ನು ಕಂಡಾಗ ಅವನನ್ನು ಅಪ್ಪಿಕೊಂಡು ಬಹಳ ಹೊತ್ತಿನ ತನಕ ಅತ್ತನು.


ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,


ಅಬ್ರಾಮನು ಕೆದೊರ್ಲಗೋಮರನನ್ನೂ ಮತ್ತು ಅವನೊಡನಿದ್ದ ರಾಜರುಗಳನ್ನೂ ಸೋಲಿಸಿದ ಮೇಲೆ ತನ್ನ ಮನೆಗೆ ಹಿಂತಿರುಗಿದನು. ಆಗ ಸೊದೋಮಿನ ರಾಜನು ಅಬ್ರಾಮನನ್ನು ಭೇಟಿಯಾಗಲು ಶಾವೆ ಕಣಿವೆಗೆ ಹೋದನು. (ಈಗ ಇದಕ್ಕೆ ರಾಜನ ಕಣಿವೆ ಎಂದು ಕರೆಯುತ್ತಾರೆ.)


ಸೌಲನು ಸರ್ವಾಂಗಹೋಮವನ್ನು ಅರ್ಪಿಸಿ ಮುಗಿಸುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸಲು ಹೊರಗೆ ಹೋದನು.


ಆಗ ಯೆಹೋವನ ದೂತನು ಬಿಳಾಮನಿಗೆ, “ಆ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಆದ್ದರಿಂದ ಬಿಳಾಮನು ಬಾಲಾಕನ ನಾಯಕರೊಡನೆ ಹೋದನು.


ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಸುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ. ನೀನು ಆಗಲೇ ಯಾಕೆ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ನೀನು ಭಾವಿಸಿಕೊಂಡಿರುವಿಯಾ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು