Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:4 - ಪರಿಶುದ್ದ ಬೈಬಲ್‌

4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದರು. ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಿದ್ಯಾನ್ಯರ ಹಿರಿಯರಿಗೆ, “ದನಕರುಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮುದಾಯದವರು ನಮ್ಮನ್ನೂ ನಮ್ಮ ಸುತ್ತಮುತ್ತಲಿನವರನ್ನೂ ನಿರ್ಮೂಲ ಮಾಡುವ ಹಾಗಿದೆ,” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲರನ್ನೂ ನಿರ್ಮೂಲಮಾಡುವ ಹಾಗಿದೆಯಲ್ಲವೇ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:4
13 ತಿಳಿವುಗಳ ಹೋಲಿಕೆ  

ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.


ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.


ಚಿಪ್ಪೋರನ ಮಗನಾದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಮೋವಾಬ್ ದೇಶದ ರಾಜನಾಗಿದ್ದನು. ಅವನು ಇಸ್ರೇಲರ ಸಂಗಡ ಎಂದಾದರೂ ವಿವಾದ ಮಾಡಿದನೋ? ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?


“ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.


ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರ ಅರಸನಾಗಿದ್ದನು. ಇಸ್ರೇಲರು ಅಮೋರಿಯರಿಗೆ ಮಾಡಿದ್ದೆಲ್ಲವನ್ನು ಅವನು ಕಂಡಿದ್ದನು.


ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.


ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಅಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು.


ಯೆಹೋವನು ಮೋಶೆಯೊಡನೆ ಮಾತಾಡಿ ಹೀಗೆಂದನು:


ಇಸ್ರೇಲರು ಯೆಹೋವನಿಗೆ ವಿರೋಧವಾಗಿ ಮತ್ತೆ ದುಷ್ಕೃತ್ಯಗಳನ್ನೇ ಮಾಡಿದರು. ಆದ್ದರಿಂದ ಮಿದ್ಯಾನ್ಯರು ಇಸ್ರೇಲರ ಮೇಲೆ ಏಳುವರ್ಷ ಪ್ರಭುತ್ವ ನಡೆಸುವಂತೆ ಯೆಹೋವನು ಆಸ್ಪದ ಮಾಡಿದನು.


ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು