Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:7 - ಪರಿಶುದ್ದ ಬೈಬಲ್‌

7 ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೋವಾಬ್ಯರ ಹಿರಿಯರೂ ವಿುದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದಾಗ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:7
15 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಜನರೆದುರಿನಲ್ಲಿ ನನಗೆ ನೀವು ಮಹತ್ವವನ್ನು ಕೊಡುವದಿಲ್ಲ. ಸ್ವಲ್ಪ ಬಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನ್ನ ಜನರಿಗೆ ನೀವು ಸುಳ್ಳನ್ನು ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಬಹಳ ಪ್ರೀತಿ. ನೀವು ಸಾಯತಕ್ಕಲ್ಲದವರನ್ನು ಸಾವಿಗೀಡು ಮಾಡುತ್ತೀರಿ. ಬದುಕತಕ್ಕಲ್ಲದವರನ್ನು ಜೀವಂತವಾಗಿಡುತ್ತೀರಿ.


ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.


ಇಸ್ರೇಲರನ್ನು ಆಶೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’


ಬಿಳಾಮನು, “ಈ ರಾತ್ರಿ ನೀವು ಇಲ್ಲೇ ಇಳಿದುಕೊಳ್ಳಿರಿ. ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ನಿಮಗೆ ತಿಳಿಸುವೆನು” ಎಂದು ಹೇಳಿದನು. ಆದ್ದರಿಂದ ಮೋವಾಬ್ಯರ ಹಿರಿಯರು ಆ ರಾತ್ರಿ ಬಿಳಾಮನ ಮನೆಯಲ್ಲಿ ಇಳಿದುಕೊಂಡರು.


ಇಸ್ರೇಲರು ಬೆಯೋರನ ಮಗನಾದ ಬಿಳಾಮನನ್ನು ಕೊಂದರು. (ಬಿಳಾಮನು ಮಂತ್ರ ವಿದ್ಯೆಯಿಂದ ಭವಿಷ್ಯವನ್ನು ಹೇಳುತ್ತಿದ್ದನು.) ಯುದ್ಧದಲ್ಲಿ ಇಸ್ರೇಲರು ಬಹಳಷ್ಟು ಜನರನ್ನು ಕೊಂದರು.


ಇದರ ಅರ್ಥವೇನೆಂದರೆ, ರಸ್ತೆಯು ಶಾಖೆಗಳಾಗಿ ಒಡೆಯುವ ಸ್ಥಳದಲ್ಲಿ ಬಾಬಿಲೋನಿನ ರಾಜನು ಶಕುನವನ್ನು ಕೇಳಲು ನಿಂತಿದ್ದಾನೆ. ಅವನು ಕೆಲವು ಬಾಣಗಳನ್ನು ಅಲುಗಾಡಿಸಿದ್ದಾನೆ. ಅವನು ಕೆಲವು ಬಾಣಗಳನ್ನು ಚದರಿಸಿ, ತನ್ನ ವಂಶದ ವಿಗ್ರಹಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು, ಮತ್ತು ತಾನು ಕೊಂದ ಪ್ರಾಣಿಯ ಕಾಳಿಜವನ್ನು ನೋಡಿದನು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು