Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:8 - ಪರಿಶುದ್ದ ಬೈಬಲ್‌

8 ಬಿಳಾಮನು, “ಈ ರಾತ್ರಿ ನೀವು ಇಲ್ಲೇ ಇಳಿದುಕೊಳ್ಳಿರಿ. ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ನಿಮಗೆ ತಿಳಿಸುವೆನು” ಎಂದು ಹೇಳಿದನು. ಆದ್ದರಿಂದ ಮೋವಾಬ್ಯರ ಹಿರಿಯರು ಆ ರಾತ್ರಿ ಬಿಳಾಮನ ಮನೆಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಬಿಳಾಮನು, “ಈ ರಾತ್ರಿ ನೀವು ಇಲ್ಲೇ ತಂಗಿರಿ. ಸರ್ವೇಶ್ವರ ನನಗೆ ಕೊಡುವ ಉತ್ತರವನ್ನು ಬೆಳಿಗ್ಗೆ ತಿಳಿಸುವೆನು,” ಎಂದನು. ಅಂತೆಯೇ, ಮೋವಾಬ್ಯರ ಮುಖಂಡರು ಬಿಳಾಮನ ಬಳಿಯಲ್ಲಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ರಾತ್ರಿ ನೀವು ಇಲ್ಲೇ ಇಳಿದುಕೊಂಡಿರ್ರಿ; ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ತಿಳಿಸುವೆನು ಎಂದು ಹೇಳಲಾಗಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:8
13 ತಿಳಿವುಗಳ ಹೋಲಿಕೆ  

ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ನೀನು ಆ ದುಷ್ಟರನ್ನು ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ, ಅವು ಬೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಬ ಹತ್ತಿರದವನು ಮತ್ತು ಪ್ರೀತಿಪಾತ್ರನು ಎಂದು ಅವರು ಬಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನ್ನಿದ ತುಂಬಾ ದೂರದಲ್ಲಿದ್ದಾರೆ.


ಅದಕ್ಕೆ ಬಿಳಾಮನು, “ಯೆಹೋವನು ನನಗೆ ತಿಳಿಸುವುದನ್ನು ನಾನು ಹೇಳಬಾರದೇ?” ಎಂದು ಕೇಳಿದನು.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿಯಲ್ಲಿರುವ ಈ ಮನುಷ್ಯರು ಯಾರು?” ಎಂದು ಕೇಳಿದನು.


ಬಿಳಾಮನು ಬಾಲಾಕನ ಅಧಿಕಾರಿಗಳಿಗೆ, “ಬಾಲಾಕನು ನನಗೆ ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನನ್ನ ದೇವರಾದ ಯೆಹೋವನ ಆಜ್ಞೆಗೆ ವಿರೋಧವಾಗಿ ನಾನೇನೂ ಮಾಡಲು ಸಾಧ್ಯವಿಲ್ಲ. ಯೆಹೋವನು ಅಪ್ಪಣೆ ಕೊಡದ ಹೊರತು ನಾನು ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ಮಾಡಲಾರೆ.


ಬಿಳಾಮನು, “ನಾನು ಈಗ ಬಂದಿದ್ದೇನೆ. ಆದರೆ, ನಿನಗೆ ಇಷ್ಟವಾಗುವಂಥದ್ದನ್ನು ಹೇಳಲು ನನಗೆ ಸಾಧ್ಯವಿಲ್ಲ. ದೇವರು ನನಗೆ ತಿಳಿಸುವುದನ್ನೇ ನಾನು ಹೇಳಬೇಕು” ಅಂದನು.


ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.


ಆದರೆ ದೇವಮನುಷ್ಯನು ರಾಜನಿಗೆ, “ನಾನು ನಿನ್ನೊಡನೆ ಮನೆಗೆ ಬರುವುದಿಲ್ಲ! ನೀನು ನಿನ್ನ ಅರ್ಧರಾಜ್ಯವನ್ನು ಕೊಟ್ಟರೂ ನಾನು ಬರುವುದಿಲ್ಲ! ನಾನು ಈ ಸ್ಥಳದಲ್ಲಿ ಏನನ್ನೂ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ.


ಆದರೆ ಮೀಕಾಯೆಹುವು, “ಇಲ್ಲ! ಯೆಹೋವನಾಣೆ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು