Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:13 - ಪರಿಶುದ್ದ ಬೈಬಲ್‌

13 ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸದೆ ಕಡೇ ಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಬಾಲಾಕನು, “ದಯಮಾಡಿ ನನ್ನೊಡನೆ ಇನ್ನೊಂದು ಸ್ಥಳಕ್ಕೆ ಬನ್ನಿ. ಅಲ್ಲಿಂದಲೂ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸರು. ಅವರ ಒಂದು ಕೊನೆ ತುಣುಕು ಮಾತ್ರ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಬಾಲಾಕನು - ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು; ಆದರೆ ಅವರೆಲ್ಲರೂ ಕಾಣಿಸದೆ ಕಡೇಭಾಗವು ಮಾತ್ರ ಕಾಣಿಸುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:13
10 ತಿಳಿವುಗಳ ಹೋಲಿಕೆ  

ಜನರನ್ನು ಶಪಿಸುವುದೇ ಅವನಿಗೆ ಇಷ್ಟವಾಗಿತ್ತು. ಆದ್ದರಿಂದ ಆ ಶಾಪಗಳು ಅವನಿಗೇ ಸಂಭವಿಸಲಿ. ಅವನು ಜನರನ್ನು ಆಶೀರ್ವದಿಸಲೇ ಇಲ್ಲ. ಆದ್ದರಿಂದ ಅವನಿಗೆ ಒಳ್ಳೆಯದಾಗದಂತೆ ಮಾಡು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.


“‘ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.


ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್‌ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.


ಅದಕ್ಕೆ ಬಿಳಾಮನು, “ಯೆಹೋವನು ನನಗೆ ತಿಳಿಸುವುದನ್ನು ನಾನು ಹೇಳಬಾರದೇ?” ಎಂದು ಕೇಳಿದನು.


ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಆದ್ದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು, ಯಾಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ಈ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು