Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:15 - ಪರಿಶುದ್ದ ಬೈಬಲ್‌

15 ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಿಳಾಮನು ಅವನಿಗೆ, “ನೀನು ಇಲ್ಲಿ ದಹನಬಲಿಯರ್ಪಿಸುವ ಸ್ಥಳದಲ್ಲಿರು. ನಾನು ಅತ್ತ ಕಡೆ ಹೋಗಿ (ಸರ್ವೇಶ್ವರನನ್ನು) ಸಂದರ್ಶಿಸಿ ಬರುತ್ತೇನೆ,” ಎಂದು ಹೇಳಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಿಳಾಮನು ಅವನಿಗೆ - ನೀನು ಇಲ್ಲೇ ಸರ್ವಾಂಗಹೋಮಮಾಡಿದ ಸ್ಥಳದಲ್ಲಿರು; ನಾನು ಅತ್ತಕಡೆ ಹೋಗಿ [ಯೆಹೋವನನ್ನು] ಎದುರುಗೊಳ್ಳುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:15
5 ತಿಳಿವುಗಳ ಹೋಲಿಕೆ  

ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.


ಬಿಳಾಮನು, “ಈ ರಾತ್ರಿ ನೀವು ಇಲ್ಲೇ ಇಳಿದುಕೊಳ್ಳಿರಿ. ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ನಿಮಗೆ ತಿಳಿಸುವೆನು” ಎಂದು ಹೇಳಿದನು. ಆದ್ದರಿಂದ ಮೋವಾಬ್ಯರ ಹಿರಿಯರು ಆ ರಾತ್ರಿ ಬಿಳಾಮನ ಮನೆಯಲ್ಲಿ ಇಳಿದುಕೊಂಡರು.


ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಮತ್ತೆ ಹೋಗಿ ಹೀಗೆ ಹೇಳಬೇಕು” ಅಂದನು.


ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು