Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:24 - ಪರಿಶುದ್ದ ಬೈಬಲ್‌

24 ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ಜನಾಂಗದವರು ಪ್ರಾಯದ ಸಿಂಹದಂತೆ ಎದ್ದು ಮೃಗೇಂದ್ರನಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ರಕ್ತವನ್ನು ಕುಡಿದು ಮಾಂಸವನ್ನು ತಿಂದು ತೃಪ್ತಿಹೊಂದಿದ ಹೊರತು ಮಲಗುವದಿಲ್ಲವಷ್ಟೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:24
20 ತಿಳಿವುಗಳ ಹೋಲಿಕೆ  

ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ.


“ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ. ಅವನು ಮುಂಜಾನೆಯಲ್ಲಿ ಕೊಂದು ತಿನ್ನುವನು. ಅವನು ಸಾಯಂಕಾಲ ಮಿಕ್ಕುಳಿದುದ್ದನ್ನು ಹಂಚಿಕೊಳ್ಳುವನು.”


ಆದರೆ ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ಯೂದ ಕುಲದ ಸಿಂಹವಾಗಿರುವಾತನು (ಕ್ರಿಸ್ತ) ಜಯಗಳಿಸಿದನು. ಆತನು ದಾವೀದನ ಸಂತತಿಯವನು. ಆತನು ಸುರುಳಿಯನ್ನು ಮತ್ತು ಅದರ ಏಳು ಮುದ್ರೆಗಳನ್ನು ತೆರೆಯಲು ಸಮರ್ಥನಾಗಿದ್ದಾನೆ” ಎಂದು ಹೇಳಿದನು.


ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”


“ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.


ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ.


ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.


ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ.


ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.


ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.


ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ” ಎಂದು ಹೇಳಿದನು.


ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು.


ಆರು ಮೆಟ್ಟಿಲುಗಳ ಪ್ರತಿಯೊಂದು ಮೆಟ್ಟಿಲಿನಲ್ಲಿ ಎರಡು ಸಿಂಹಗಳಿದ್ದವು. ಪ್ರತಿಯೊಂದು ಕೊನೆಯಲ್ಲಿ ಒಂದು ಸಿಂಹವಿತ್ತು. ಬೇರೆ ಯಾವ ರಾಜ್ಯದಲ್ಲೂ ಇಂತಹ ಸಿಂಹಾಸನ ಇರಲಿಲ್ಲ.


ಸಿಂಹಾಸನವನ್ನು ಹತ್ತಲು ಆರು ಮೆಟ್ಟಲುಗಳಿದ್ದವು. ಅದಕ್ಕೆ ಬಂಗಾರದಿಂದ ಮಾಡಿದ ಪಾದಪೀಠವಿತ್ತು. ಸಿಂಹಾಸನದ ಎರಡು ಕಡೆಗಳಲ್ಲೂ ಕೈಗಳನ್ನಿಡಲು ಏರ್ಪಾಟು ಮಾಡಲಾಗಿತ್ತು; ಅವುಗಳ ಸಮೀಪದಲ್ಲಿ ಎರಡು ಸಿಂಹಗಳ ಆಕೃತಿಯನ್ನು ಮಾಡಿಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು