Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:3 - ಪರಿಶುದ್ದ ಬೈಬಲ್‌

3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಳಿಕ ಬಿಳಾಮನು ಬಾಲಾಕನಿಗೆ, “ನೀನು ದಹನಬಲಿದಾನ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಸರ್ವೇಶ್ವರ ನನಗೆ ದರ್ಶನ ಕೊಟ್ಟರೂ ಕೊಡಬಹುದು. ಅವರು ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುತ್ತೇನೆ,” ಎಂದು ಹೇಳಿ ಮರಗಳಿಲ್ಲದ ಒಂದು ದಿಣ್ಣೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಿಳಾಮನು ಬಾಲಾಕನಿಗೆ - ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಒಂದು ವೇಳೆ ಯೆಹೋವನು ನನಗೆ ದರ್ಶನ ಕೊಟ್ಟಾನು; ಆತನು ನನಗೆ ಸೂಚಿಸುವ ಸಂಗತಿಯನ್ನು ನಿನಗೆ ತಿಳಿಸುವೆನು ಎಂದು ಹೇಳಿ ಮರವಿಲ್ಲದ ಒಂದು ದಿನ್ನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:3
16 ತಿಳಿವುಗಳ ಹೋಲಿಕೆ  

ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು.


ಇಸ್ರೇಲರನ್ನು ಆಶೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:


ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.


ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ಇತ್ರೋನನು ದೇವರಿಗೆ ಯಜ್ಞಗಳನ್ನು, ಕಾಣಿಕೆಗಳನ್ನು ಸಮರ್ಪಿಸಿದನು. ಆಗ ಆರೋನನು ಮತ್ತು ಇಸ್ರೇಲರ ಎಲ್ಲಾ ಹಿರಿಯರು ಮೋಶೆಯ ಮಾವನಾದ ಇತ್ರೋನನೊಡನೆ ದೇವರ ಸನ್ನಿಧಿಯಲ್ಲಿ ಊಟಮಾಡಲು ಬಂದರು.


ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ,


ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯೊಂದು ಯಜ್ಞವೇದಿಕೆಯ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದಾಗ,


ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.


ಅದಕ್ಕೆ ಬಿಳಾಮನು, “ಯೆಹೋವನು ನನಗೆ ತಿಳಿಸುವುದನ್ನು ನಾನು ಹೇಳಬಾರದೇ?” ಎಂದು ಕೇಳಿದನು.


ಅದಕ್ಕೆ ಬಿಳಾಮನು, “ಯೆಹೋವನು ಹೇಳುವುದನ್ನೇ ನಾನು ಮಾಡುತ್ತೇನೆ ಎಂದು ನಾನು ನಿನಗೆ ಮೊದಲೇ ಹೇಳಲಿಲ್ಲವೆ?” ಅಂದನು.


ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು