Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:17 - ಪರಿಶುದ್ದ ಬೈಬಲ್‌

17 “ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:17
33 ತಿಳಿವುಗಳ ಹೋಲಿಕೆ  

“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


“ಮೂಲೇ ಕಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲು ಮತ್ತು ಮುನ್ನುಗ್ಗುವ ಸೈನ್ಯ, ಇವೆಲ್ಲವು ಒಟ್ಟಾಗಿ ಯೆಹೂದಿಂದ ಬರುವದು.


ದೇವರೇ, ನಿನ್ನ ಸಿಂಹಾಸನವು ಶಾಶ್ವತವಾದದ್ದು. ಒಳ್ಳೆಯತನವು ನಿನ್ನ ರಾಜದಂಡವಾಗಿದೆ.


“ನಮ್ಮ ದೇವರ ಮಹಾಕರುಣೆಯಿಂದ ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.


ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.


ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು.


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


“ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.


ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.


ಆದರೆ ಅಹಾಬನು ಸತ್ತಾಗ ಮೋವಾಬಿನ ರಾಜನು ಇಸ್ರೇಲಿನ ರಾಜನ ವಿರುದ್ಧವಾಗಿ ದಂಗೆಯೆದ್ದು ಅವನ ಆಳ್ವಿಕೆಯಿಂದ ಬೇರೆಯಾದನು.


ಸೌಲನು, “ಎಲ್ಲಾ ನಾಯಕರನ್ನೂ ನನ್ನ ಹತ್ತಿರಕ್ಕೆ ಕರೆದು ತನ್ನಿ. ಈ ದಿನ ಯಾರು ಪಾಪಮಾಡಿದ್ದಾರೆಂಬುದನ್ನು ಗುರುತಿಸೋಣ.


ಮೋವಾಬೇ, ಇದು ನಿನಗೆ ಕೆಟ್ಟದ್ದಾಗಿದೆ. ಕೆಮೋಷಿನ ಜನರೇ, ನೀವು ನಾಶವಾದಿರಿ. ಅವನ ಪುತ್ರರು ಓಡಿಹೋದರು. ಅಮೋರಿಯ ರಾಜನಾದ ಸೀಹೋನನು ಅವನ ಪುತ್ರಿಯರನ್ನು ಸೆರೆ ಒಯ್ದನು.


ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.


ನಾನು ದೇವರ ಮುಂದೆ ಅಡ್ಡಬೀಳುತ್ತೇನೆ, ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ. ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ. ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ. ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು ನಾನು ನೋಡುತ್ತಿದ್ದೇನೆ.


ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು