Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:18 - ಪರಿಶುದ್ದ ಬೈಬಲ್‌

18 ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸ್ವಾಧೀನವಾಗಿಸಿಕೊಂಡಿದ್ದಾನೆ ಎದೋಮ್ಯರ ನಾಡನ್ನು; ಆತನಿಗೆ ಅಧೀನರಾದರು ಹಗೆಗಳಾದ ಸೇಯೀರಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಲ್ಲದೆ ಎದೋಮ್ಯರ ದೇಶವನ್ನೂ ಸ್ವಾಧೀನ ಪಡಿಸಿಕೊಂಡಿದ್ದಾನೆ; ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:18
15 ತಿಳಿವುಗಳ ಹೋಲಿಕೆ  

ಆಗ ಎದೋಮಿನಲ್ಲಿ ಉಳಿದವರು ಮತ್ತು ನನ್ನ ಹೆಸರಿನಿಂದ ಕರೆಯಲ್ಪಟ್ಟ ಜನರು ಸಹಾಯಕ್ಕಾಗಿ ಯೆಹೋವನನ್ನು ನೋಡುವರು.” ಇದು ಯೆಹೋವನ ನುಡಿ. ಆತನು ಅವುಗಳನ್ನು ನೆರವೇರಿಸುವನು.


ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


“ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.


ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಪುನರ್‌ಸ್ಥಾಪಿಸು.


ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ


ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”


ಆದರೆ ಎದೋಮಿನ ಅರಸನು, “ನಮ್ಮ ದೇಶವನ್ನು ನೀವು ದಾಟಿಹೋಗಕೂಡದು. ದಾಟುವುದಾದರೆ, ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟನು.


“ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”


“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.


“ಎದೋಮೇ, ನಿನ್ನನ್ನು ನಾನು ಅತ್ಯಂತ ಚಿಕ್ಕದಾದ ಜನಾಂಗವನ್ನಾಗಿ ಮಾಡುವೆನು. ಎಲ್ಲರೂ ನಿನ್ನನ್ನು ಹೆಚ್ಚಾಗಿ ಹಗೆ ಮಾಡುವರು.


ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು.


ಅದು ಹೀಗೆ ಸಂಭವಿಸಿತು: ದಾವೀದನು ಮೊದಲು ಎದೋಮ್ಯರನ್ನು ಸೋಲಿಸಿದ್ದನು, ದಾವೀದನ ಸೈನ್ಯಕ್ಕೆ ಯೋವಾಬನು ಸೇನಾಪತಿಯಾಗಿದ್ದನು. ಸತ್ತ ಜನರನ್ನು ಸಮಾಧಿ ಮಾಡಲು ಯೋವಾಬನು ಎದೋಮಿಗೆ ಹೋದನು. ಅಲ್ಲಿ ಇನ್ನೂ ವಾಸವಾಗಿದ್ದ ಗಂಡಸರನ್ನೆಲ್ಲ ಯೋವಾಬನು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು