Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:19 - ಪರಿಶುದ್ದ ಬೈಬಲ್‌

19 “ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೌದು, ಇಸ್ರಯೇಲರು ಬಲವಂತರು ಯಕೋಬ್ಯರದೇ ದೊರೆತನವಾಯಿತು ನಗರಗಳಿಂದ ತಲೆತಪ್ಪಿಸಿಕೊಂಡವರೂ ನಾಶವಾದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲ್ಯರೋ ಬಲಗೊಂಡವರು; ಯಾಕೋಬ್ಯರಿಗೇ ದೊರೆತನವಾಯಿತು; ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು, ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:19
19 ತಿಳಿವುಗಳ ಹೋಲಿಕೆ  

ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು.


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.


ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.


ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.


“ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು