Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:20 - ಪರಿಶುದ್ದ ಬೈಬಲ್‌

20 “ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಹೀಗೆಂದು ನುಡಿದನು: “ಅಮಾಲೇಕ್ಯರು ಶ್ರೇಷ್ಠರಲ್ಲವೆ ರಾಷ್ಟ್ರಗಳಲ್ಲಿ? ಆದರೂ ಅವರ ಗತಿ ವಿನಾಶವೇ ಸರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ನುಡಿದದ್ದೇನಂದರೆ - ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ; ಆದರೂ ನಾಶವೇ ಅವರ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:20
18 ತಿಳಿವುಗಳ ಹೋಲಿಕೆ  

ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ಅದೇ ರೀತಿ ಅರಸನು ಆಜ್ಞಾಪಿಸಿದನು. ರಾಜಾಜ್ಞೆಯು ಇನ್ನೊಂದು ದಿವಸ ಮುಂದುವರಿಯಿತು ಮತ್ತು ಹಾಮಾನನ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲಿಗೆ ಹಾಕಿದರು.


ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.


ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.


ದಾವೀದನು ಅವರನ್ನು ಸೋಲಿಸಿ ಅವರನ್ನು ಕೊಂದನು. ಅವರು ಹೊತ್ತಾರೆಯಿಂದ ಮಾರನೆಯ ದಿನದ ಸಂಜೆಯವರೆಗೆ ಹೋರಾಡಿದರು. ನಾನೂರು ಮಂದಿ ಯುವಕರು ತಮ್ಮ ಒಂಟೆಗಳ ಮೇಲೇರಿ ಓಡಿಹೋದದ್ದನ್ನು ಬಿಟ್ಟರೆ, ಉಳಿದ ಅಮಾಲೇಕ್ಯರಲ್ಲಿ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ.


ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.


ಸೌಲನು ಬಹಳ ಧೈರ್ಯಶಾಲಿ. ಅವನು ಅಮಾಲೇಕ್ಯರನ್ನೂ ಸೋಲಿಸಿದನು. ಇಸ್ರೇಲರನ್ನು ಕೊಳ್ಳೆಹೊಡೆಯಬೇಕೆಂದಿದ್ದ ಶತ್ರುಗಳಿಂದ ಸೌಲನು ಇಸ್ರೇಲರನ್ನು ರಕ್ಷಿಸಿದನು.


ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.


ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು.


ರೆಫೀದೀಮಿನಲ್ಲಿ ಅಮಾಲೇಕ್ಯರು ಬಂದು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಿದರು.


ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.


ನಿಮಗೆ ಯಾವಾಗಲೂ ಬೇಕಾದಷ್ಟು ನೀರು ಇರುವುದು; ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.


“ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”


ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಅಮಾಲೇಕ್ಯರು ಅವರನ್ನು ಕಾನಾನಿಗೆ ಹೋಗದಂತೆ ತಡೆಯಲು ಪ್ರಯತ್ನಿಸಿದರು. ಅಮಾಲೇಕ್ಯರು ಮಾಡಿದ್ದನ್ನು ನಾನು ನೋಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು