Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:24 - ಪರಿಶುದ್ದ ಬೈಬಲ್‌

24 ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:24
24 ತಿಳಿವುಗಳ ಹೋಲಿಕೆ  

ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್.


ಕಿತ್ತೀಮಿನ ಹಡಗುಗಳು ಬಂದು ಉತ್ತರದ ರಾಜನೊಂದಿಗೆ ಯುದ್ಧ ಮಾಡುವವು. ಆ ಹಡಗುಗಳು ಬರುವದನ್ನು ಅವನು ನೋಡಿ ಹೆದರಿಕೊಳ್ಳುವನು. ಅವನು ಪರಿಶುದ್ಧ ನಿಬಂಧನೆಯ ಮೇಲೆ ಕೋಪಿಸಿಕೊಂಡು ಹಿಂತಿರುಗುವನು. ಅವನು ಹಿಂತಿರುಗಿದ ಮೇಲೆ ಪರಿಶುದ್ಧ ನಿಬಂಧನೆಯನ್ನು ತೊರೆದವರಿಗೆ ಸಹಾಯ ಮಾಡುವನು.


“ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”


ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.


“ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)


ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ಆಗ ಅವನು, “ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು.


ಆ ಹೋತವು ಗ್ರೀಕ್ ರಾಜ್ಯ. ಅದರ ಎರಡು ಕಣ್ಣುಗಳ ಮಧ್ಯದ ಕೊಂಬು ಮೊದಲನೆಯ ಅರಸ.


“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.


ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.


ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ಈ ವಾರ್ತೆಯು ತಲುಪಿತು.


ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.


ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. ಅವರು, “ಸೀಸರನದು” ಎಂದು ಹೇಳಿದರು.


ಆಗ ಬಿಳಾಮನು ಹೀಗೆಂದನು: “ದೇವರು ಇದನ್ನು ಮಾಡುವಾಗ ಯಾರೂ ಉಳಿಯರು.


ಬಾಷಾನಿನ ಅಲ್ಲೋನ್ ಮರಗಳಿಂದ ಹುಟ್ಟುಗಳನ್ನು ತಯಾರಿಸಿದರು. ನಿನ್ನ ಮೇಲ್ಮಾಳಿಗೆಯನ್ನು ಕಿತ್ತೀಮ್ ದ್ವೀಪದ ತಿಲಕದ ಮರಗಳಿಂದ ಮಾಡಿದರು. ಅದನ್ನು ದಂತಗಳಿಂದ ಶೃಂಗರಿಸಿದರು.


ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು