Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:7 - ಪರಿಶುದ್ದ ಬೈಬಲ್‌

7 ನಿಮಗೆ ಯಾವಾಗಲೂ ಬೇಕಾದಷ್ಟು ನೀರು ಇರುವುದು; ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಅಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ ಅಭಿವೃದ್ಧಿಯಾಗುತ್ತಿದೆ ಅವರ ರಾಜ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರ ಕಪಿಲೆಗಳಿಂದ ನೀರು ಹರಿಯುತ್ತಲೇ ಇದೆ; ಅವರ ಬಿತ್ತನೆಗೆ ಬೇಕಾದಷ್ಟು ನೀರಿದೆ. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು; ಅವರ ರಾಜ್ಯವು ಅಭಿವೃದ್ಧಿಯಲ್ಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. ಅವರ ರಾಜ್ಯವು ಅಭಿವೃದ್ಧಿ ಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:7
29 ತಿಳಿವುಗಳ ಹೋಲಿಕೆ  

ದೇವರು ತನ್ನನ್ನು ಇಸ್ರೇಲರ ಅರಸನನ್ನಾಗಿ ಆಗಲೇ ಮಾಡಿದ್ದಾನೆಂದು ದಾವೀದನಿಗೆ ತಿಳಿದುಬಂತು. ಆತನು ದಾವೀದನ ಸಾಮ್ರಾಜ್ಯವನ್ನು ವಿಸ್ತರಿಸಿ ಬಲಿಷ್ಠಗೊಳಿಸಿದನು. ಯೆಹೋವನು ದಾವೀದನನ್ನೂ ಇಸ್ರೇಲರನ್ನೂ ಪ್ರೀತಿಸಿದ್ದರಿಂದ ಹಾಗೆ ಮಾಡಿದನು.


ಯೆಹೋವನು ನಿಜವಾಗಿಯೂ ತನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದ್ದಾನೆಂಬುದನ್ನೂ ಆತನು ತನ್ನ ಜನರಾದ ಇಸ್ರೇಲರಿಗಾಗಿ ನನ್ನ ರಾಜ್ಯವನ್ನು ಸ್ಥಿರಪಡಿಸಿದ್ದಾನೆಂತಲೂ ದಾವೀದನು ಇದರ ಮೂಲಕ ತಿಳಿದುಕೊಂಡನು.


ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.


ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ!


ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. ನನಗೆ ಗೊತ್ತಿಲ್ಲದವರೂ ನನ್ನ ಸೇವೆಮಾಡುವರು.


ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


“ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”


ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು.


ಹೀರಾಮನು ತೂರಿನ ರಾಜನಾಗಿದ್ದನು. ಹೀರಾಮನು ಯಾವಾಗಲೂ ದಾವೀದನ ಸ್ನೇಹಿತನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.


ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.


ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.


ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು