Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:9 - ಪರಿಶುದ್ದ ಬೈಬಲ್‌

9 ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:9
21 ತಿಳಿವುಗಳ ಹೋಲಿಕೆ  

ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”


ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ.


ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.”


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!


ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ಅದನ್ನು ಕೋಪಗೊಳಿಸುವಷ್ಟು ಧೈರ್ಯ ಯಾರಿಗೂ ಇಲ್ಲ. “ಹೀಗಿರುವಲ್ಲಿ ನನಗೆ ವಿರುದ್ಧವಾಗಿ ನಿಂತುಕೊಳ್ಳುವಷ್ಟು ಶಕ್ತಿ ಯಾರಿಗಿದೆ?


ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡುಮಾಡುವೆನು.


ಆದ್ದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು, ಯಾಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ಈ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.


ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಆ ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.


ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.


ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.


ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.


“ನಿಮ್ಮ ದೇವರಾದ ಯೆಹೋವನು ಕೆಟ್ಟಸಂಗತಿಗಳೆಲ್ಲಾ ನಿಮ್ಮ ವೈರಿಗಳಿಗೆ ಆಗುವಂತೆ ಮಾಡುವನು. ಯಾಕೆಂದರೆ ಅವರು ನಿಮ್ಮನ್ನು ದ್ವೇಷಿಸಿ ತೊಂದರೆ ಕೊಡುತ್ತಿರುವರು.


ಆರು ಮೆಟ್ಟಿಲುಗಳ ಪ್ರತಿಯೊಂದು ಮೆಟ್ಟಿಲಿನಲ್ಲಿ ಎರಡು ಸಿಂಹಗಳಿದ್ದವು. ಪ್ರತಿಯೊಂದು ಕೊನೆಯಲ್ಲಿ ಒಂದು ಸಿಂಹವಿತ್ತು. ಬೇರೆ ಯಾವ ರಾಜ್ಯದಲ್ಲೂ ಇಂತಹ ಸಿಂಹಾಸನ ಇರಲಿಲ್ಲ.


ಸಿಂಹಾಸನವನ್ನು ಹತ್ತಲು ಆರು ಮೆಟ್ಟಲುಗಳಿದ್ದವು. ಅದಕ್ಕೆ ಬಂಗಾರದಿಂದ ಮಾಡಿದ ಪಾದಪೀಠವಿತ್ತು. ಸಿಂಹಾಸನದ ಎರಡು ಕಡೆಗಳಲ್ಲೂ ಕೈಗಳನ್ನಿಡಲು ಏರ್ಪಾಟು ಮಾಡಲಾಗಿತ್ತು; ಅವುಗಳ ಸಮೀಪದಲ್ಲಿ ಎರಡು ಸಿಂಹಗಳ ಆಕೃತಿಯನ್ನು ಮಾಡಿಟ್ಟಿದ್ದರು.


ತನ್ನ ಹೆಂಡತಿ ಜೆರೆಷಳಿಗೂ ಮತ್ತು ತನಗೆ ಸಲಹೆ ಕೊಟ್ಟಿದ್ದ ಮಿತ್ರವೃಂದದವರಿಗೂ ನಡೆದ ವಿಷಯ ತಿಳಿಸಿದನು. ಆಗ ಅವರು ತಿಳಿಸಿದ್ದೇನೆಂದರೆ: “ಮೊರ್ದೆಕೈಯು ಯೆಹೂದ್ಯನಾಗಿದ್ದರೆ ನೀನು ಜಯಗಳಿಸುವುದಿಲ್ಲ. ಈಗಲೇ ನೀನು ಸೋಲುತ್ತಿರುವಿ. ನಿಜವಾಗಿಯೂ ನೀನೇ ನಾಶವಾಗುವಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು