Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:53 - ಪರಿಶುದ್ದ ಬೈಬಲ್‌

53 “ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 “ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 “ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ನಾಡನ್ನು ಸ್ವಂತ ನಾಡಾಗಿ ಹಂಚಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 “ಇವರಿಗೆ ನಾಡನ್ನು ಹೆಸರುಗಳ ಲೆಕ್ಕದ ಪ್ರಕಾರ ಸೊತ್ತಾಗಿ ಹಂಚಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:53
16 ತಿಳಿವುಗಳ ಹೋಲಿಕೆ  

ಯಾಜಕನಾದ ಎಲ್ಲಾಜಾರನು, ನೂನನ ಮಗನಾದ ಯೆಹೋಶುವನು ಮತ್ತು ಇಸ್ರೇಲಿನ ಕುಲಗಳ ನಾಯಕರು, ಇಸ್ರೇಲರಿಗೆ ಕಾನಾನ್ ನಾಡಿನ ಯಾವಯಾವ ಭಾಗವನ್ನು ಕೊಡಬೇಕೆಂಬುದನ್ನು ತೀರ್ಮಾನಿಸಿದರು.


ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.”


ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.


ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’


ನೀವು ಇದನ್ನು ಸ್ವಂತ ಸ್ವಾಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.


ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವ ಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


“ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.


ಯೆಹೋವನು ಇಸ್ರೇಲರಿಗೆ, “ನಾನು ನಿಮಗೆ ಕಾನಾನ್ ದೇಶವನ್ನು ಕೊಡುವೆನು. ಆ ವಾಗ್ದತ್ತ ದೇಶವು ನಿಮ್ಮದಾಗುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು