Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:55 - ಪರಿಶುದ್ದ ಬೈಬಲ್‌

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಪ್ರತಿಯೊಂದು ಕುಲದ ಮೂಲಪುರುಷನ ಹೆಸರನ್ನು ಬರೆದು ಚೀಟು ಹಾಕಿ ಆಯಾ ಕುಲಕ್ಕೆ ಸೊತ್ತನ್ನು ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:55
21 ತಿಳಿವುಗಳ ಹೋಲಿಕೆ  

ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವ ಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಜನರು ತಮ್ಮ ಪ್ರದೇಶವನ್ನು ಯಾವ ವಿಧಾನದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು.


ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.


ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.


ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ.


ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


ಆಮೇಲೆ ದಾನ್ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರವು ತನ್ನ ಭೂಮಿಯನ್ನು ಪಡೆಯಿತು.


ಭೂಮಿಯ ಆರನೆಯ ಭಾಗವನ್ನು ನಫ್ತಾಲಿ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರವು ತನ್ನ ಭೂಭಾಗವನ್ನು ಪಡೆಯಿತು.


ಭೂಮಿಯ ಐದನೆಯ ಭಾಗವನ್ನು ಆಶೇರ್ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರದವರು ಭೂಮಿಯಲ್ಲಿ ತಮ್ಮ ಪಾಲನ್ನು ಪಡೆದುಕೊಂಡರು.


ಭೂಮಿಯ ನಾಲ್ಕನೆಯ ಭಾಗವನ್ನು ಇಸ್ಸಾಕಾರ್ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದರು.


ತರುವಾಯ ತಮ್ಮ ಪಾಲಿನ ಭೂಮಿಯನ್ನು ಪಡೆದವರು ಜೆಬುಲೂನ್ ಕುಲದವರು. ಜೆಬುಲೂನ್ ಕುಲದ ಪ್ರತಿಯೊಂದು ಗೋತ್ರಕ್ಕೆ ವಾಗ್ದಾನದ ಪ್ರಕಾರ ಭೂಮಿಯನ್ನು ಕೊಡಲಾಯಿತು. ಜೆಬುಲೂನ್ಯರ ಪ್ರದೇಶವು ಸಾರೀದಿನವರೆಗೂ ವಿಸ್ತರಿಸಿತ್ತು.


ಅನಂತರ ಯೆಹೋಶುವನು ಸಿಮೆಯೋನ್ ಕುಲದ ಎಲ್ಲ ಗೋತ್ರಗಳಿಗೆ ಅವರ ಪಾಲಿನ ಭೂಮಿಯನ್ನು ಕೊಟ್ಟನು. ಅವರಿಗೆ ಸಿಕ್ಕ ಭೂಮಿಯು ಯೆಹೂದ ಕುಲದವರಿಗೆ ಸೇರಿದ ಭೂಭಾಗದ ಮಧ್ಯದಲ್ಲಿತ್ತು.


ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.


ಯೋಸೇಫನ ವಂಶಸ್ಥರು ಯೆಹೋಶುವನೊಂದಿಗೆ ಮಾತನಾಡಿ, “ನೀನು ನಮಗೆ ಸ್ವಾಸ್ತ್ಯದ ಒಂದು ಕ್ಷೇತ್ರವನ್ನು ಮಾತ್ರ ಕೊಟ್ಟಿರುವೆ. ಆದರೆ ನಾವು ಬಹಳ ಜನರಿದ್ದೇವೆ. ಯೆಹೋವನು ತನ್ನ ಜನರಿಗೆ ಕೊಟ್ಟ ಈ ದೇಶದಲ್ಲಿ ನೀನು ನಮಗೆ ಕೇವಲ ಒಂದು ಭಾಗವನ್ನು ಮಾತ್ರ ಏಕೆ ಕೊಟ್ಟೆ?” ಎಂದು ಕೇಳಿದರು.


ಕುಲವು ದೊಡ್ಡದಾಗಿರಲಿ ಚಿಕ್ಕದಾಗಿರಲಿ ಚೀಟುಬಂದ ಪ್ರಕಾರವೇ ಸ್ವಾಸ್ತ್ಯವನ್ನು ಗೊತ್ತುಪಡಿಸಬೇಕು.”


ನೀವು ಇದನ್ನು ಸ್ವಂತ ಸ್ವಾಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.


ಅವರು, “ಸ್ವಾಮೀ, ಚೀಟುಹಾಕಿ ಇಸ್ರೇಲರಿಗೆ ದೇಶವನ್ನು ಹಂಚಿಕೊಡಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ್ದಾನೆ. ಅದಲ್ಲದೆ ನಮ್ಮ ಸಂಬಂಧಿಕನಾದ ಚಲ್ಪಹಾದನ ಭೂಮಿಯನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು