Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:16 - ಪರಿಶುದ್ದ ಬೈಬಲ್‌

16 “ಎಲ್ಲಾ ಮನುಷ್ಯರ ಯೋಚನೆಗಳನ್ನು ತಿಳಿದಿರುವ ದೇವರಾದ ಯೆಹೋವನು ಈ ಸಮೂಹಕ್ಕೆ ಒಬ್ಬ ನಾಯಕನನ್ನು ನೇಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:16
20 ತಿಳಿವುಗಳ ಹೋಲಿಕೆ  

ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಈ ಲೋಕದಲ್ಲಿ ನಮ್ಮೆಲ್ಲರನ್ನೂ ಶಿಕ್ಷಿಸಿದಂಥ ತಂದೆಗಳು ನಮಗಿದ್ದರು. ನಾವು ಅವರನ್ನು ಗೌರವಿಸಿದೆವು. ಆದ್ದರಿಂದ ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಂದ ದಂಡನೆಗಳನ್ನು ಸ್ವೀಕರಿಸಿಕೊಳ್ಳುವುದು ಬಹಳ ಮುಖ್ಯವಾದದ್ದು. ನಾವು ಹೀಗೆ ಮಾಡಿದರೆ ಜೀವವನ್ನು ಹೊಂದಿಕೊಳ್ಳುವೆವು.


ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


ಇಗೋ, ನೀವು ಆಸೆಪಟ್ಟು ಆರಿಸಿದ ರಾಜನು ಇಲ್ಲಿರುವನು. ಯೆಹೋವನು ಈ ರಾಜನನ್ನು ನಿಮಗೆ ನೇಮಿಸಿದ್ದಾನೆ.


ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


“ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ.


ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತುವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು.


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


“ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.”


ಆದರೆ ರಾಜನಾದ ಚಿದ್ಕೀಯನು ಯೆರೆಮೀಯನಿಗೆ ರಹಸ್ಯವಾಗಿ, “ಯೆರೆಮೀಯನೇ, ನಮಗೆ ಉಸಿರನ್ನೂ ಜೀವವನ್ನೂ ದಯಪಾಲಿಸಿದ ಯೆಹೋವನ ಆಣೆಯಾಗಿ ಹೇಳುತ್ತೇನೆ, ನಾನು ನಿನ್ನನ್ನು ಕೊಲ್ಲುವುದಿಲ್ಲ. ಕೊಲ್ಲಬಯಸುವ ಅಧಿಕಾರಿಗಳ ಕೈಗೂ ನಿನ್ನನ್ನು ಕೊಡುವದಿಲ್ಲವೆಂದು ನಾನು ಮಾತು ಕೊಡುತ್ತೇನೆ” ಎಂದು ಹೇಳಿದನು.


ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು