Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:15 - ಪರಿಶುದ್ದ ಬೈಬಲ್‌

15 ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಯೆಹೋವನಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಮಾವಾಸ್ಯೆಯಲ್ಲಿ ದಹನಬಲಿಯನ್ನೂ ಅರ್ಪಿಸುವುದಲ್ಲದೆ ಪಾಪಪರಿಹಾರಕಬಲಿಗಾಗಿ ಒಂದು ಹೋತವನ್ನು ಸರ್ವೇಶ್ವರನಿಗೆ ಹೆಚ್ಚಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಯೆಹೋವನಿಗೆ ಸಮರ್ಪಿಸಬೇಕು. ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯವನ್ನೂ ಸಮರ್ಪಿಸುವದಲ್ಲದೆ [ಅಮಾವಾಸ್ಯೆಯಲ್ಲಿ] ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:15
14 ತಿಳಿವುಗಳ ಹೋಲಿಕೆ  

ಅವರಿಗೆ ಹೀಗೆ ಹೇಳು: ನೀವು ಯೆಹೋವನಿಗೆ ಕೊಡಬೇಕಾಗಿರುವ ತ್ಯಾಗಮಯವಾದ ಕಾಣಿಕೆಗಳು ಇವುಗಳೇ: ದಿನನಿತ್ಯದ ಸರ್ವಾಂಗಹೋಮಕ್ಕಾಗಿ ಒಂದು ವರ್ಷ ವಯಸ್ಸಿನ ಎರಡು ಗಂಡುಕುರಿಗಳು.


ಇದಲ್ಲದೆ ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಒಂದು ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.


ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


“ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.


ಅಧಿಪತಿಯು ತನ್ನ ಪಾಪದ ಕುರಿತು ತಿಳಿದುಕೊಂಡರೆ, ಅಂಗದೋಷವಿಲ್ಲದ ಹೋತವನ್ನು ತರಬೇಕು. ಅದು ಅವನ ಕಾಣಿಕೆಯಾಗಿರುವುದು.


ಬಳಿಕ ಅವರು ಒಂದು ಆಡನ್ನು ಕತ್ತರಿಸಿ ಆಡಿನ ರಕ್ತವನ್ನು ಯೋಸೇಫನ ಸುಂದರವಾದ ನಿಲುವಂಗಿಯ ಮೇಲೆ ಹಾಕಿದರು.


ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.


ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.


ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಒಂದು ಹೋತವನ್ನೂ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.


ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಅರ್ಪಿಸಬೇಕು.


ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು