Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:26 - ಪರಿಶುದ್ದ ಬೈಬಲ್‌

26 “ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 [ಪಸ್ಕವಾದ ಏಳು] ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮ ಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:26
13 ತಿಳಿವುಗಳ ಹೋಲಿಕೆ  

“ವಾರಗಳ ಹಬ್ಬವನ್ನು ಆಚರಿಸಿರಿ. ಈ ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ.


“ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.


“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನು ಮಾಡಬಾರದು.


ಆ ದಿನದಲ್ಲಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನು ಯೆಹೋವನಿಗೆ ಸುಗಂಧ ವಾಸನೆಯಾಗಿರುವ ಸರ್ವಾಂಗಹೋಮವಾಗಿ ಅರ್ಪಿಸಬೇಕು.


“ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ.


ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.


ಏಳು ದಿನಗಳವರೆಗೆ ನೀವು ಯೆಹೋವನಿಗೆ ಹೋಮವನ್ನು ಅರ್ಪಿಸಬೇಕು. ಏಳನೆಯ ದಿನದಲ್ಲಿ ನೀವು ಇನ್ನೊಂದು ಬಾರಿ ವಿಶೇಷ ಸಭೆಯಾಗಿ ಸೇರಬೇಕು. ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು