Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:11 - ಪರಿಶುದ್ದ ಬೈಬಲ್‌

11 ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ಪಾಪ ಪರಿಹಾರಕ ಬಲಿ, ದೈನಿಕ ದಹನಬಲಿ ಇದರ ಧಾನ್ಯ-ಪಾನ ದ್ರವ್ಯ ನೈವೇದ್ಯ ಇವುಗಳ ಸಮೇತ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕಯಜ್ಞ, ನಿತ್ಯಸರ್ವಾಂಗಹೋಮ, ಇದರ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳು ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪಾಪ ಪರಿಹಾರಕ ಬಲಿಗಾಗಿ ಒಂದು ಹೋತನ್ನು ಅರ್ಪಿಸುವದರ ಜೊತೆಗೆ ಪ್ರಾಯಶ್ಚಿತ್ತದ ಪಾಪ ಪರಿಹಾರಕ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:11
10 ತಿಳಿವುಗಳ ಹೋಲಿಕೆ  

“ದೋಷಪರಿಹಾರಕ ದಿನದಲ್ಲಿ ಆರೋನನು ಮಹಾ ಪವಿತ್ರಸ್ಥಳದೊಳಗೆ ಪ್ರವೇಶಿಸುವ ಮೊದಲು ಪಾಪಪರಿಹಾರಕ ಯಜ್ಞವಾಗಿ ಹೋರಿಯನ್ನೂ ಸರ್ವಾಂಗಹೋಮವಾಗಿ ಟಗರನ್ನೂ ಅರ್ಪಿಸಬೇಕು.


“ಆರೋನನು ಇಸ್ರೇಲರಿಂದ ಪಾಪಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು.


ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.


“ಬಳಿಕ ಆರೋನನು ಚೀಟು ಹಾಕುವುದರ ಮೂಲಕ ಯೆಹೋವನಿಗೋಸ್ಕರ ಆರಿಸಲ್ಪಟ್ಟ ಹೋತವನ್ನು ಅರ್ಪಿಸುವನು. ಆರೋನನು ಈ ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.


ಮತ್ತು ಒಂದು ಕುರಿಮರಿಗೆ ಮೂರು ಸೇರು ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು