Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:39 - ಪರಿಶುದ್ದ ಬೈಬಲ್‌

39 “ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನೀವು ಕಾಣಿಕೆಯಾಗಿಯಾಗಲಿ ಹರಕೆಯನ್ನು ತೀರಿಸುವದಕ್ಕಾಗಿಯಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯಾರ್ಪಣೆ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ ‘ಇದಲ್ಲದೆ ನಿಮ್ಮ ಹರಕೆಯನ್ನೂ ನಿಮ್ಮ ಉಚಿತವಾದ ಬಲಿಗಳನ್ನೂ ನಿಮ್ಮ ದಹನಬಲಿಗಳನ್ನೂ ನಿಮ್ಮ ಧಾನ್ಯಪಾನ ಅರ್ಪಣೆಗಳನ್ನೂ ನಿಮ್ಮ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಯೆಹೋವ ದೇವರಿಗೆ ಮಾಡತಕ್ಕೆ ಸಮರ್ಪಣೆಗಳು ಇವೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:39
20 ತಿಳಿವುಗಳ ಹೋಲಿಕೆ  

“ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.


ಹಿಜ್ಕೀಯನು ತನ್ನ ಪಶುಗಳಲ್ಲಿ ಕೆಲವನ್ನು ಸರ್ವಾಂಗಹೋಮಕ್ಕಾಗಿ ಕೊಟ್ಟನು. ಇವುಗಳನ್ನು ಪ್ರತಿನಿತ್ಯದ ಬೆಳಿಗ್ಗೆ ಮತ್ತು ಸಂಜೆ ಸಮರ್ಪಿಸುವ ಸರ್ವಾಂಗಹೋಮಗಳಿಗಾಗಿ ಉಪಯೋಗಿಸಿಕೊಳ್ಳಲಾಯಿತು; ಅಲ್ಲದೆ ಸಬ್ಬತ್ ದಿನದಂದೂ ಅಮವಾಸ್ಯೆ ದಿನದಂದೂ ಅವುಗಳನ್ನು ಅರ್ಪಿಸಿದರು. ಇವೆಲ್ಲಾ ದೇವರ ಕಟ್ಟಳೆಗಳಿಗನುಸಾರವಾಗಿದ್ದವು.


ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು.


ನಿಮ್ಮ ಮಾಸಿಕಕೂಟಗಳನ್ನೂ ಸಭಾಕೂಟಗಳನ್ನೂ ನಾನು ದ್ವೇಷಿಸುತ್ತೇನೆ. ಇವು ನನಗೆ ಭಾರವಾಗಿವೆ. ಈ ಭಾರದಿಂದ ನಾನು ಬೇಸತ್ತು ಹೋಗಿದ್ದೇನೆ.


ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮಾವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.


ಇದಾದ ಬಳಿಕ ಅವರು ನಿತ್ಯ ಸರ್ವಾಂಗಹೋಮವನ್ನೂ ಅಮಾವಾಸ್ಯೆ ಮತ್ತು ಇತರ ಹಬ್ಬದ ದಿನಗಳಲ್ಲಿ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಬೇಕಾದ ಯಜ್ಞಹೋಮಗಳನ್ನೂ ಸಮರ್ಪಿಸಿದರು. ಜನರು ತಾವು ಯೆಹೋವನಿಗೆ ಕೊಡಬೇಕೆಂದಿದ್ದ ಇತರ ಕಾಣಿಕೆಗಳನ್ನು ಸಹ ತಂದು ಕೊಡಲಾರಂಭಿಸಿದರು.


“ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ,


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


“ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತ ಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಮೀರಿ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”


ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.


ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.


ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರೇಲರಿಗೆ ತಿಳಿಸಿದನು.


ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.


ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.


“ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.


ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.


ಇದಲ್ಲದೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಹಬ್ಬದ ಪ್ರತಿ ದಿವಸಗಳಲ್ಲಿ ನೇಮಿತ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು