Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:7 - ಪರಿಶುದ್ದ ಬೈಬಲ್‌

7 “ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ಉಪವಾಸ ಆಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನ ನೀವು ಯಾವ ದುಡಿಮೆಯನ್ನು ಮಾಡದೆ ದೇವಾರಾಧನೆಗಾಗಿ ಸಭೆ ಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಉಪವಾಸಾಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮಾಡದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:7
17 ತಿಳಿವುಗಳ ಹೋಲಿಕೆ  

ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.


ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.


ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.


ಇಲ್ಲ! ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ!


ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ?


ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ ಆಗಲೇ ಕಳೆದಿತ್ತು.


ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು