Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:8 - ಪರಿಶುದ್ದ ಬೈಬಲ್‌

8 ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವದರ್ಶನದ ಗುಡಾರಕ್ಕೆ ಸೇರಿದ ಉಪಕರಣಗಳನ್ನು ನೋಡಿಕೊಳ್ಳಬೇಕು. ಇಸ್ರಯೇಲರ ಪರವಾಗಿ ದೇವಸ್ಥಾನದ ಸೇವಾಕಾರ್ಯಗಳನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:8
13 ತಿಳಿವುಗಳ ಹೋಲಿಕೆ  

ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.


ಬಳಿಕ ಪವಿತ್ರ ಗುಡಾರವನ್ನು ಕೆಳಗಿಳಿಸಲಾಯಿತು. ಗೇರ್ಷೋನ್ ಮತ್ತು ಮೆರಾರೀ ಕುಲಗಳ ಗಂಡಸರು ಪವಿತ್ರ ಗುಡಾರವನ್ನು ಹೊತ್ತುಕೊಂಡು ಅವರ ಹಿಂದೆ ಹೊರಟರು.


ದೇವದರ್ಶನಗುಡಾರಕ್ಕೋಸ್ಕರ ಮೆರಾರೀಯರು ಮಾಡತಕ್ಕ ಕೆಲಸ ಇದೇ. ಅವರ ಕೆಲಸವನ್ನು ಮೇಲ್ವಿಚಾರಣೆ ಮಾಡುವುದು ಮಹಾಯಾಜಕ ಆರೋನನ ಮಗನಾದ ಈತಾಮಾರನ ಜವಾಬ್ದಾರಿಯಾಗಿದೆ.”


ದೇವದರ್ಶನಗುಡಾರಕ್ಕೋಸ್ಕರ ಮತ್ತು ತಮ್ಮ ಕಾವಲಿನ ಕರ್ತವ್ಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕೆಲಸ ಇದೇ. ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಕನಾಗಿರಬೇಕು.”


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು.


“ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸಿಕೊಡು. ಅವರು ಇಸ್ರೇಲರ ಮಧ್ಯದಿಂದ ಆರೋನನಿಗೋಸ್ಕರವಾಗಿ ಪ್ರತಿಷ್ಠಿತರಾಗಿದ್ದಾರೆ.


ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.


ದಾವೀದನ ಕೊನೇ ಆಜ್ಞೆಯ ಪ್ರಕಾರ ಲೇವಿ ವಂಶದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಲೆಕ್ಕಿಸಲಾಯಿತು.


ಆದ್ದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳುಮಾಡಬೇಡಿ. ತನ್ನ ಸೇವೆಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು