Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:3 - ಪರಿಶುದ್ದ ಬೈಬಲ್‌

3 “ಇನ್ನೂ ತನ್ನ ತಂದೆಯ ಮನೆಯಲ್ಲಿರುವ ಯುವತಿಯು ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿಕೊಂಡರೆ ಅಥವಾ ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಕನ್ಯೆಯೊಬ್ಬಳು ತನ್ನ ತಂದೆಯ ಮನೆಯಲ್ಲಿದ್ದು ಸರ್ವೇಶ್ವರನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆಮಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಸ್ತ್ರೀಯು ಯೆಹೋವ ದೇವರಿಗೆ ಹರಕೆಮಾಡಿ, ತನ್ನ ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿ ದೇವರಿಗೆ ಹರಕೆಯನ್ನು ಮಾಡಿದಾಗ, ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:3
10 ತಿಳಿವುಗಳ ಹೋಲಿಕೆ  

“ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.


ಅವಳ ತಂದೆಯು ಅವಳ ಹರಕೆಯನ್ನಾಗಲಿ ಆಣೆಯನ್ನಾಗಲಿ ಕೇಳಿಯೂ ಅದರ ಬಗ್ಗೆ ಅವಳಿಗೆ ಏನೂ ಹೇಳದಿದ್ದರೆ, ಆಕೆಯು ಅಂಥಾ ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು.


“ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,


ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.


ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು