Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:7 - ಪರಿಶುದ್ದ ಬೈಬಲ್‌

7 ಗಂಡನು ಅದರ ಬಗ್ಗೆ ತಿಳಿದ ದಿನದಂದು ಆಕೆಗೆ ಅದರ ಬಗ್ಗೆ ಏನೂ ಹೇಳದಿದ್ದರೆ, ಆಕೆ ತಾನು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಗಂಡಸು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳ ಗಂಡನು ಆ ವಿಷಯವನ್ನು ತಿಳಿದು ಸುಮ್ಮನಿದ್ದ ಪಕ್ಷದಲ್ಲಿ ಅವಳ ಹರಕೆಗಳೂ ಪ್ರತಿಜ್ಞೆಗಳೂ ನೆರವೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:7
7 ತಿಳಿವುಗಳ ಹೋಲಿಕೆ  

“ಆದರೆ ಅವಳು ತನ್ನ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಿಲ್ಲದಿರುವಾಗಲೇ ಮದುವೆಯಾದರೆ,


ಆದರೆ ಗಂಡನು ಅದನ್ನು ಕೇಳಿದ ದಿನವೇ ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ಯೆಹೋವನು ಅವಳನ್ನು ಕ್ಷಮಿಸುವನು.


ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.


ಆಮೇಲೆ ಹೆಂಗಸರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಸ್ವರ್ಗದ ರಾಣಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.”


ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ನಾನು ನಿಮಗೆ ಒಂದು ಉದಾಹರಣೆಯನ್ನು ಕೊಡುತ್ತೇನೆ: ಗಂಡನು ಬದುಕಿರುವ ತನಕ ಹೆಂಡತಿಯು ಕಾನೂನಿನ ಪ್ರಕಾರ ಅವನಿಗೆ ಬದ್ಧಳಾಗಿರಬೇಕು. ಆದರೆ ಆಕೆಯ ಗಂಡನು ತೀರಿಕೊಂಡರೆ, ವಿವಾಹದ ಕಾನೂನಿನಿಂದ ಆಕೆಯು ಬಿಡುಗಡೆಯಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು