Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:8 - ಪರಿಶುದ್ದ ಬೈಬಲ್‌

8 ಆದರೆ ಗಂಡನು ಅದನ್ನು ಕೇಳಿದ ದಿನವೇ ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ಯೆಹೋವನು ಅವಳನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಗಂಡನು, ಕೇಳಿದಾಗಲೆ ಬೇಡವೆಂದು ಆಜ್ಞೆ ಮಾಡಿದರೆ ಆ ಹರಕೆ ಇಲ್ಲವೆ ಆ ಅವಿಚಾರ ಪ್ರತಿಜ್ಞೆ ನಿರರ್ಥಕವಾಗುತ್ತವೆ. ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಗಂಡನು ಕೇಳಿದಾಗಲೇ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಅವಿಚಾರ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:8
10 ತಿಳಿವುಗಳ ಹೋಲಿಕೆ  

ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.


ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ.


ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.


“ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.


ಆದರೆ ತಂದೆಯು ಆ ಸಂಗತಿಯನ್ನು ತಿಳಿದ ದಿನವೇ ಅದನ್ನು ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಇಟ್ಟುಕೊಂಡ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ತಂದೆಯು ಆಕ್ಷೇಪಿಸಿದ್ದರಿಂದ ಯೆಹೋವನು ಅವಳನ್ನು ಕ್ಷಮಿಸುವನು.


ಗಂಡನು ಅದರ ಬಗ್ಗೆ ತಿಳಿದ ದಿನದಂದು ಆಕೆಗೆ ಅದರ ಬಗ್ಗೆ ಏನೂ ಹೇಳದಿದ್ದರೆ, ಆಕೆ ತಾನು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕು.


“ವಿಧವೆಯಾಗಲಿ ವಿವಾಹವಿಚ್ಛೇಧನ ಹೊಂದಿದ ಸ್ತ್ರೀಯಾಗಲಿ ತಾನು ಮಾಡಿದ ಪ್ರತಿಯೊಂದು ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.


ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.


ಆಮೇಲೆ ಹೆಂಗಸರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಸ್ವರ್ಗದ ರಾಣಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು