Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:14 - ಪರಿಶುದ್ದ ಬೈಬಲ್‌

14 ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯುದ್ಧಭೂಮಿಯಿಂದ ಬಂದಿದ್ದ ಆ ಸೈನ್ಯದ ಸಹಸ್ರಾಧಿಪತಿಗಳನ್ನು ಹಾಗು ಶತಾಧಿಪತಿಗಳನ್ನು ಕಂಡು ಮೋಶೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಮೋಶೆಯು ಯುದ್ಧಭೂವಿುಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:14
13 ತಿಳಿವುಗಳ ಹೋಲಿಕೆ  

ಕೋಪಗೊಂಡರೂ ಪಾಪ ಮಾಡಬೇಡಿ ಮತ್ತು ದಿನವೆಲ್ಲಾ ಕೋಪದಿಂದಿರಬೇಡಿ.


ದೇವಮನುಷ್ಯನು (ಎಲೀಷನು) ಯೋವಾಷನ ಮೇಲೆ ಕೋಪಗೊಂಡು, “ನೀನು ಐದು ಅಥವಾ ಆರು ಸಲ ಹೊಡೆಯಬೇಕಾಗಿತ್ತು! ಆಗ ನೀನು ಅರಾಮ್ಯರನ್ನು ನಾಶಗೊಳಿಸುವವರೆಗೆ ಸೋಲಿಸಿ ಬಿಡಬಹುದಾಗಿತ್ತು! ಆದರೆ ಈಗ ನೀನು ಅರಾಮ್ಯರನ್ನು ಮೂರು ಸಲ ಮಾತ್ರ ಸೋಲಿಸುವೆ!” ಎಂದು ಹೇಳಿದನು.


ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಹೀಗೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!’” ಎಂದು ಹೇಳಿದನು.


ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,


(ಮೋಶೆಯು ಬಹಳ ದೀನನಾದ ವ್ಯಕ್ತಿ. ಅವನು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ದೀನನಾಗಿದ್ದನು.)


ಮೋಶೆಯು ಪಾಪಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಕುರಿತು ವಿಚಾರಿಸಿದಾಗ, ಅದನ್ನು ಸುಟ್ಟುಬಿಟ್ಟರೆಂದು ಕೇಳಿ ಆರೋನನ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್‌ರವರ ಮೇಲೆ ಬಹುಕೋಪಗೊಂಡನು.


ಆರೋನನು, “ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ.


ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.


ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಬಂದು ಸೈನಿಕರನ್ನು ಎದುರುಗೊಂಡರು.


ಅವನು ಅವರಿಗೆ, “ನೀವು ಎಲ್ಲಾ ಹೆಂಗಸರನ್ನು ಉಳಿಸಿದ್ದೇಕೆ?


“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.


ದಾವೀದನು ತನ್ನ ಜನರನ್ನು ಲೆಕ್ಕಮಾಡಿದನು. ಅವನು ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು