Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:3 - ಪರಿಶುದ್ದ ಬೈಬಲ್‌

3 ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಮೋಶೆ ಇಸ್ರಯೇಲರಿಗೆ, “ನೀವು ಒಂದೊಂದು ಕುಲದಿಂದ ಸಾವಿರ ಜನರ ಮೇರೆಗೆ ಕಾಲಾಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಮೋಶೆಯು ಇಸ್ರಾಯೇಲ್ಯರಿಗೆ - ನೀವು ಒಂದೊಂದು ಕುಲದಿಂದ ಸಾವಿರ ಜನರ ಮೇರೆಗೆ ಭಟರನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:3
12 ತಿಳಿವುಗಳ ಹೋಲಿಕೆ  

ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.


ಯೆಹೋವನು ಯೇಹುವಿಗೆ, “ನೀನು ಒಳ್ಳೆಯದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳವರೆಗೆ ಆಳುತ್ತಾರೆ” ಎಂದು ಹೇಳಿದನು.


ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ.


“ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.


“ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!


ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು.


ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.


ಇಸ್ರೇಲಿನ ಕುಲಗಳವರಲ್ಲಿ ಪ್ರತಿಯೊಂದು ಕುಲದಿಂದ ಒಂದು ಸಾವಿರ ಗಂಡಸರನ್ನು ದಂಡೆಯಾತ್ರೆಗೆ ಕಳುಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು