Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:6 - ಪರಿಶುದ್ದ ಬೈಬಲ್‌

6 ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:6
17 ತಿಳಿವುಗಳ ಹೋಲಿಕೆ  

ಆದರೆ ಜನರು ಮೋಶೆಯ ಮಾತನ್ನು ನಂಬಲಿಲ್ಲ. ಅವರು ಪರ್ವತಪ್ರದೇಶದ ಕಡೆಗೆ ಹೊರಟರು. ಆದರೆ ಮೋಶೆಯೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯೂ ಜನರೊಂದಿಗೆ ಹೋಗಲಿಲ್ಲ.


ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.


ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.


ಸೌಲನು ಅಹೀಯನಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. (ಆ ಸಮಯದಲ್ಲಿ ದೇವರ ಪವಿತ್ರ ಪೆಟ್ಟಿಗೆಯು ಇಸ್ರೇಲರೊಂದಿಗೆ ಇತ್ತು.)


ಆ ಬೆನ್ಯಾಮೀನ್ಯನು, “ಇಸ್ರೇಲರು ಫಿಲಿಷ್ಟಿಯರಿಂದ ಸೋತು, ಹಿಮ್ಮೆಟ್ಟಿದರು. ಇಸ್ರೇಲರ ಪಡೆಯು ಅನೇಕ ಸೈನಿಕರನ್ನು ಕಳೆದುಕೊಂಡಿತು. ನಿನ್ನ ಮಕ್ಕಳಿಬ್ಬರೂ ಸತ್ತರು. ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು” ಎಂದು ಹೇಳಿದನು.


ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.


ಆದ್ದರಿಂದ ಇಸ್ರೇಲರ ಕುಲಗಳಿಂದ ಪ್ರತಿಯೊಂದು ಕುಲಕ್ಕೆ ಒಂದು ಸಾವಿರ ಗಂಡಸರ ಪ್ರಕಾರ ಹನ್ನೆರಡು ಸಾವಿರ ಗಂಡಸರನ್ನು ಯುದ್ಧಕ್ಕೆ ಆರಿಸಿಕೊಳ್ಳಬೇಕು” ಅಂದನು.


ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು.


“ನೀವು ಯುದ್ಧಕ್ಕೆ ಹೊರಟುನಿಂತಾಗ ಯಾಜಕನು ಸೈನಿಕರ ಬಳಿಗೆ ಹೋಗಿ ಹೀಗೆ ಹೇಳಬೇಕು:


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು