Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:29 - ಪರಿಶುದ್ದ ಬೈಬಲ್‌

29 ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಗಾದ್ಯರಲ್ಲೂ ರೂಬೇನ್ಯರಲ್ಲೂ ಯುದ್ಧಸನ್ನದ್ಧರಾದವರೆಲ್ಲರು ನಿಮ್ಮೊಡನೆ ಜೋರ್ಡನ್ ನದಿಯನ್ನು ದಾಟಿ ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧಮಾಡಿದ್ದೇ ಆದರೆ ಕಾನಾನ್ ನಾಡು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸೊತ್ತಾಗಿ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಗಾದ್ಯರಲ್ಲಿಯೂ ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ಹೊಳೆಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆಯು ಅವರಿಗೆ, “ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಎಲ್ಲರೂ ಯುದ್ಧಕ್ಕೆ ಸಿದ್ಧವಾಗಿದ್ದು, ನಿಮ್ಮ ಸಂಗಡ ಯೊರ್ದನ್ ನದಿಯನ್ನು ಯೆಹೋವ ದೇವರ ಮುಂದೆ ದಾಟಿದರೆ, ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸೊತ್ತಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:29
10 ತಿಳಿವುಗಳ ಹೋಲಿಕೆ  

ಆದ್ದರಿಂದ ಮೋಶೆಯು, ಅವರ ಬಗ್ಗೆ ಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರೇಲ್ ಕುಲಗಳ ಗೋತ್ರಪ್ರಧಾನರಿಗೂ ಆದೇಶಗಳನ್ನು ಕೊಟ್ಟನು.


ಆದರೆ ಆರಿಸಲ್ಪಟ್ಟವರು ನಿಮ್ಮೊಂದಿಗೆ ನದಿಯನ್ನು ದಾಟದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿ ಭೂಮಿಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದನು.


ಗಿಲ್ಯಾದ್ ಪಟ್ಟಣವೂ ಸಹ ಈ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರ್ಯರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಈ ಪ್ರದೇಶಕ್ಕೆ ಸೇರಿತ್ತು. ಇಡೀ ಹೆರ್ಮೋನ್ ಬೆಟ್ಟಪ್ರದೇಶ ಮತ್ತು ಸಲ್ಕಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಆ ಪ್ರದೇಶಕ್ಕೆ ಸೇರಿಕೊಂಡಿದ್ದವು.


ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು.


ಯೆಹೋವನ ಸೇವಕನಾದ ಮೋಶೆಯು ಮತ್ತು ಇಸ್ರೇಲರು ಈ ಎಲ್ಲ ಅರಸರನ್ನು ಸೋಲಿಸಿದರು. ಮೋಶೆಯು ಈ ಪ್ರದೇಶವನ್ನು ರೂಬೇನನ ಕುಲದವರಿಗೂ ಗಾದನ ಕುಲದವರಿಗೂ ಮನಸ್ಸೆ ಕುಲದ ಅರ್ಧಜನರಿಗೂ ಸ್ವಾಸ್ತ್ಯವಾಗಿ ಕೊಟ್ಟುಬಿಟ್ಟನು.


ಎರಡುವರೆ ಕುಲಗಳ ಜನರಿಗೆ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಕೊಟ್ಟಿದ್ದನು. ಆದರೆ ಲೇವಿಯ ಕುಲದವರಿಗೆ ಉಳಿದವರಂತೆ ಯಾವ ಪ್ರದೇಶವನ್ನೂ ಕೊಡಲಿಲ್ಲ.


ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.


ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.


ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.


ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು