“‘ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.
ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು.