ಅರಣ್ಯಕಾಂಡ 35:12 - ಪರಿಶುದ್ದ ಬೈಬಲ್12 ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಂಥವನು ಸಭೆಯವರಿಂದ ತೀರ್ಪುಹೊಂದುವುದಕ್ಕಿಂತ ಮೊದಲೇ ಹತನಾದವನ ಸಮೀಪ ಬಂಧುವಿನಿಂದ ಸಾಯದಂತೆ ಈ ಆಶ್ರಯಧಾಮಗಳು ನಿಮ್ಮಲ್ಲಿ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಸಭೆಯವರಿಂದ ತೀರ್ಪುಹೊಂದುವದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯಸ್ಥಾನಗಳು ನಿಮ್ಮೊಳಗೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು. ಅಧ್ಯಾಯವನ್ನು ನೋಡಿ |
ಇಸ್ರೇಲಿನವನಾಗಲಿ ಅಥವಾ ಅವರೊಂದಿಗೆ ಇರುವ ಒಬ್ಬ ಪರದೇಶಿಯನಾಗಲಿ ಆಕಸ್ಮಿಕವಾಗಿ ನರಹತ್ಯೆ ಮಾಡಿದ್ದರೆ ಒಂದು ಆಶ್ರಯನಗರಕ್ಕೆ ಓಡಿಹೋಗಲು ಅವಕಾಶವಿತ್ತು. ಯಾವನೇ ಆಗಲಿ ಮತ್ತೊಬ್ಬನನ್ನು ಆಕಸ್ಮಿಕವಾಗಿ ಕೊಂದರೆ ಆ ಪಟ್ಟಣಗಳಲ್ಲಿ ಆಶ್ರಯ ಪಡೆಯಬಹುದಾಗಿತ್ತು; ಅಲ್ಲಿ ಸುರಕ್ಷಿತವಾಗಿ ವಾಸಿಸಬಹುದಾಗಿತ್ತು. ಬೆನ್ನಟ್ಟಿ ಬಂದವನು ಅವನನ್ನು ಕೊಲ್ಲಲು ಸಾಧ್ಯವಿರಲಿಲ್ಲ. ಕೊಲೆ ಮಾಡಿದವನಿಗೆ ಆ ಪಟ್ಟಣದ ನ್ಯಾಯಾಲಯವೇ ತೀರ್ಪು ನೀಡುತ್ತಿತ್ತು.
ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.