Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:20 - ಪರಿಶುದ್ದ ಬೈಬಲ್‌

20 “ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲಿ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿ ಅವನ ಮೇಲೆ ಏನನ್ನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವದರಿಂದಾಗಲಿ ಸಮಯನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ, ಇಲ್ಲವೆ ನೂಕುವುದರಿಂದಲಾದರೂ, ಸಮಯ ನೋಡಿಕೊಂಡು ಅವನ ಮೇಲೆ ಯಾವುದನ್ನಾದರೂ ಬಲವಾಗಿ ಎಸೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:20
30 ತಿಳಿವುಗಳ ಹೋಲಿಕೆ  

ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


“ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ, ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ


ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.


ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.


ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು.


ಯೇಸುವನ್ನು ಪಟ್ಟಣದಿಂದ ಹೊರಗಟ್ಟಿದರು. ಆ ಪಟ್ಟಣವು ಒಂದು ಗುಡ್ಡದ ಮೇಲಿತ್ತು. ಅವರು ಯೇಸುವನ್ನು ಗುಡ್ಡದ ಅಂಚಿಗೆ ಕರೆದುಕೊಂಡು ಬಂದು ಕೆಳಕ್ಕೆ ತಳ್ಳಿಬಿಡಬೇಕೆಂದಿದ್ದರು.


ಆದ್ದರಿಂದ ಹೆರೋದ್ಯಳು ಯೋಹಾನನನ್ನು ದ್ವೇಷಿಸಲಾರಂಭಿಸಿ ಅವನನ್ನು ಕೊಲ್ಲಿಸಬೇಕೆಂದಿದ್ದಳು.


ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು.


ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.


ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು. ಅಬ್ಷಾಲೋಮನು ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಏನನ್ನೂ ಅಮ್ನೋನನಿಗೆ ಹೇಳಲಿಲ್ಲ. ಅಮ್ನೋನನು ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು.


ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.


ದಾವೀದನು ರಾಮದ ಪಾಳೆಯದಿಂದ ಓಡಿಹೋದನು. ದಾವೀದನು ಯೋನಾತಾನನ ಬಳಿಗೆ ಹೋಗಿ, “ನಾನು ಮಾಡಿರುವ ತಪ್ಪೇನು? ನನ್ನ ಅಪರಾಧವೇನು? ನಿನ್ನ ತಂದೆಯು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದೇಕೆ?” ಎಂದು ಕೇಳಿದನು.


ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.


ಆದರೆ ಕಾಯಿನನ ಕಾಣಿಕೆಯನ್ನು ಸ್ವೀಕರಿಸಲಿಲ್ಲ. ಇದರಿಂದ ಕಾಯಿನನು ದುಃಖಿತನಾದನು ಮತ್ತು ಬಹಳ ಕೋಪಗೊಂಡನು.


ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.


ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು