Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:22 - ಪರಿಶುದ್ದ ಬೈಬಲ್‌

22 “ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೋ ವಸ್ತುವಿನಿಂದ ಒಬ್ಬನನ್ನು ಕೊಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಒಬ್ಬನು ಯಾವ ದ್ವೇಷವೂ ಇಲ್ಲದೆ, ಅಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹೊಂಚು ಕಾಯದೆ ಏನನ್ನಾದರೂ ಎಸೆಯುವುದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಅಕಸ್ಮಾತ್ತಾಗಿ ನೂಕುವದರಿಂದಾಗಲಿ ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:22
8 ತಿಳಿವುಗಳ ಹೋಲಿಕೆ  

ಆಶ್ರಯ ಸ್ಥಳಗಳಾಗುವುದಕ್ಕೆ ಪಟ್ಟಣಗಳನ್ನು ಆರಿಸಿಕೊಳ್ಳಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.


ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.


ಆದರೆ ಅವನನ್ನು ಬೆನ್ನಟ್ಟಿಕೊಂಡು ಬಂದವನು ಆಶ್ರಯನಗರಕ್ಕೆ ಬಂದರೆ, ಆ ನಗರದ ನಾಯಕರು ಕೊಂದವನನ್ನು ಬೆನ್ನಟ್ಟಿ ಬಂದವನ ಕೈಗೆ ಒಪ್ಪಿಸಬಾರದು. ಆಶ್ರಯಕೋರಿ ಅವರಲ್ಲಿಗೆ ಬಂದ ವ್ಯಕ್ತಿಯನ್ನು ಅವರು ರಕ್ಷಿಸಬೇಕು. ಯಾಕೆಂದರೆ ಆ ನರಹತ್ಯವು ಆಕಸ್ಮಿಕವಾದದ್ದೇ ಹೊರತು ದ್ವೇಷದಿಂದ ಮಾಡಿದ್ದಲ್ಲ.


ನಿಮ್ಮಲ್ಲಿ ಒಬ್ಬನು ತಿಳಿಯದೆ ಆಕಸ್ಮಿಕವಾಗಿ ನರಹತ್ಯ ಮಾಡಿದರೆ ಅವನು ಯಾವುದಾದರೊಂದು ಆಶ್ರಯನಗರಕ್ಕೆ ಹೋಗಿ ಅಡಗಿಕೊಳ್ಳಲಿ.


ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವಿನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನ ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಆ ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು.


“ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲಿ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ


ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.


ಅಥವಾ ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸಿದ್ದರಿಂದ ಮತ್ತೊಬ್ಬನು ಸತ್ತರೆ, ಅವನು ಕೊಲ್ಲಲ್ಪಟ್ಟವನ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಉದ್ದೇಶವಿಲ್ಲದೆಯೂ ಇದ್ದ ಪಕ್ಷಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು