Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:34 - ಪರಿಶುದ್ದ ಬೈಬಲ್‌

34 ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀವು ವಾಸಮಾಡುವ ನಾಡನ್ನು ಅಪವಿತ್ರ ಮಾಡಬೇಡಿ. ಸರ್ವೇಶ್ವರನೆಂಬ ನಾನೇ ಇಸ್ರಯೇಲರ ನಡುವೆ ಆ ನಾಡಿನಲ್ಲಿ ವಾಸಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು; ಯೆಹೋವನೆಂಬ ನಾನೇ ಇಸ್ರಾಯೇಲ್ಯರ ನಡುವೆ ಆ ದೇಶದಲ್ಲಿ ವಾಸಿಸುತ್ತೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:34
20 ತಿಳಿವುಗಳ ಹೋಲಿಕೆ  

ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು. ನಾನೇ ಅವರ ಪಾಳೆಯದಲ್ಲಿ ವಾಸಮಾಡುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”


ಯೆಹೋವನಿಗೆ ಚೀಯೋನಿನಿಂದಲೂ ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! ಯೆಹೋವನಿಗೆ ಸ್ತೋತ್ರವಾಗಲಿ!


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


“ಇದು ನನ್ನ ಶಾಶ್ವತ ನಿವಾಸಸ್ಥಾನ. ನಾನು ಇಲ್ಲೇ ಆಸನಾರೂಢನಾಗಿರುವೆನು. ಇದೇ ನನಗೆ ಇಷ್ಟವಾದ ಸ್ಥಳ.


ನೀನು ನಿರ್ಮಿಸುತ್ತಿರುವ ಈ ದೇವಾಲಯದಲ್ಲಿ ನಾನು ಇಸ್ರೇಲರೊಂದಿಗೆ ವಾಸಿಸುತ್ತೇನೆ. ನಾನು ಅವರನ್ನು ಎಂದೆಂದಿಗೂ ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.


ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.


ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


“ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಆ ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ.


ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’


ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.


ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”


ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.


ನಿಮ್ಮ ದೇವರಾದ ಯೆಹೋವನು ಯಾವಾಗಲೂ ನಿಮ್ಮ ಜೊತೆಯಲ್ಲಿರುವನು. ಸುಳ್ಳುದೇವರನ್ನು ಪೂಜಿಸುವವರನ್ನು ಯೆಹೋವನು ದ್ವೇಷಿಸುವುದರಿಂದ ಅವರನ್ನು ಈ ಲೋಕದಿಂದ ಅಳಿಸಿಬಿಡುವನು.


“ಈ ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸ್ವಂತಕ್ಕಾಗಿ ತೆಗೆದುಕೊಳ್ಳೋಣ” ಎಂದು ಹೇಳಿರುತ್ತೀ. ಆದಾಗ್ಯೂ ಯೆಹೋವನು ಅಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು