Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:6 - ಪರಿಶುದ್ದ ಬೈಬಲ್‌

6 ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮನುಷ್ಯಹತ್ಯೆ ಮಾಡಿದವರು ಆಶ್ರಯಕ್ಕಾಗಿ ಓಡಿಹೋಗಲು ನೀವು ನೇಮಿಸುವ ಆರು ಆಶ್ರಯನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ, ಹೀಗೆ ನಾಲ್ವತ್ತೆಂಟು ಊರುಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನುಷ್ಯ ಹತ್ಯಮಾಡಿದವರು ಆಶ್ರಯಕ್ಕಾಗಿ ಓಡಿಹೋಗುವದಕ್ಕೋಸ್ಕರ ನೀವು ನೇವಿುಸುವ ಆರು ಆಶ್ರಯ ನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:6
18 ತಿಳಿವುಗಳ ಹೋಲಿಕೆ  

ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,


ಇಸ್ರೇಲರು ಯೆಹೋವನ ಈ ಆಜ್ಞೆಯನ್ನು ಪಾಲಿಸಿದರು. ಅವರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಅವುಗಳ ಸುತ್ತಮುತ್ತಲಿನ ಭೂಮಿಯನ್ನು ಕೊಟ್ಟರು:


ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಗಾದ್ಯರು ಅವರಿಗೆ ಗಿಲ್ಯಾದಿನ ಆಶ್ರಯನಗರವಾದ ರಾಮೋತ್, ಮಹನಯೀಮ್,


ರೂಬೇನ್ಯರು ಅವರಿಗೆ ಬೆಚೆರ್, ಯಹಚಾ,


ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್‌ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ಎಫ್ರಾಯೀಮ್ ಪ್ರದೇಶದ ಬೆಟ್ಟದಲ್ಲಿರುವ ಆಶ್ರಯನಗರವಾದ ಶೆಕೆಮ್, ಗೆಜೆರ್,


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ಈ ಹೊದಿಕೆಯು ಸುರಕ್ಷಿತ ಸ್ಥಳದಂತಿರುವದು. ಅದು ಸೂರ್ಯನ ಶಾಖದಿಂದ ಅವರನ್ನು ರಕ್ಷಿಸುವದು. ಅದೇ ಸಮಯದಲ್ಲಿ ಸಣ್ಣ ದೊಡ್ಡ ಮಳೆಗಳಿಂದಲೂ ಆ ಹೊದಿಕೆಯು ರಕ್ಷಿಸುವದು.


ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳೆದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು.


ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು