Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:16 - ಪರಿಶುದ್ದ ಬೈಬಲ್‌

16 “ಮಹಾಯಾಜಕನಾದ ಆರೋನನ ಮಗನಾದ ಎಲ್ಲಾಜಾರನು ಇಡೀ ಪವಿತ್ರ ಗುಡಾರವನ್ನು ಮತ್ತು ಎಲ್ಲಾ ಪವಿತ್ರಸ್ಥಳವನ್ನು ಮತ್ತು ಅದರೊಳಗಿರುವ ಎಲ್ಲಾ ಪಾತ್ರೆಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ದೀಪದ ಎಣ್ಣೆಗೂ ಪರಿಮಳಧೂಪಕ್ಕೂ ದೈನಂದಿನ ಧಾನ್ಯಸಮರ್ಪಣೆಗೂ ಅಭಿಷೇಕತೈಲಕ್ಕೂ ಅವನು ಜವಾಬ್ದಾರನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮಹಾಯಾಜಕ ಆರೋನನ ಮಗ ಎಲ್ಲಾಜಾರನು ದೀಪದ ಎಣ್ಣೆಯನ್ನು, ಪರಿಮಳ ಧೂಪವನ್ನು, ಅನುದಿನ ನೈವೇದ್ಯ ಮಾಡುವ ಧಾನ್ಯದ್ರವ್ಯಗಳನ್ನು ಹಾಗೂ ಅಭಿಷೇಕ ತೈಲವನ್ನು ತನ್ನ ವಶದಲ್ಲೇ ಇಟ್ಟುಕೊಳ್ಳಬೇಕು. ದೇವದರ್ಶನದ ಗುಡಾರದ ಎಲ್ಲ ಭಾಗಗಳು, ಅದರಲ್ಲಿರುವ ಸಮಸ್ತ ವಸ್ತುಗಳು ಪಾತ್ರೆಪರಿಕರಗಳು ಹಾಗೂ ಅವುಗಳಲ್ಲಿರುವುದೆಲ್ಲವೂ ಅವನ ಮೇಲ್ವಿಚಾರಣೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ ಪರಿಮಳಧೂಪವನ್ನೂ ನಿತ್ಯವಾಗಿ ನೈವೇದ್ಯ ಮಾಡುವ ಧಾನ್ಯದ್ರವ್ಯವನ್ನೂ ಅಭೀಷೇಕ ತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:16
20 ತಿಳಿವುಗಳ ಹೋಲಿಕೆ  

ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,


“ಎಣ್ಣೆ ಮರದ ಕಾಯಿಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಆ ಎಣ್ಣೆ ಬೇಕಾಗಿರುತ್ತದೆ. ಆ ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು.


ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.


ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.


ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.


ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರಿಗೆ ನಾಯಕನಾಗಿದ್ದನು. ಪವಿತ್ರವಸ್ತುಗಳನ್ನು ನೋಡಿಕೊಳ್ಳುವ ಜನರಿಗೆಲ್ಲಾ ಎಲ್ಲಾಜಾರನು ಮೇಲ್ವಿಚಾರಕನಾಗಿದ್ದನು.


“ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.


ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.


ಸುವಾಸನೆಯುಳ್ಳ ಅಭಿಷೇಕತೈಲ, ಪವಿತ್ರ ಸ್ಥಳದಲ್ಲಿ ಉಪಯೋಗಿಸುವ ಸುವಾಸನೆಯುಳ್ಳ ಧೂಪ. ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲೇ ಈ ಕೆಲಸಗಾರರು ಈ ವಸ್ತುಗಳನ್ನೆಲ್ಲಾ ಮಾಡತಕ್ಕದ್ದು.”


ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಯೆಹೋವನು ಮೋಶೆ ಆರೋನರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು