Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:4 - ಪರಿಶುದ್ದ ಬೈಬಲ್‌

4 ಅವರು ದೇವದರ್ಶನಗುಡಾರದಲ್ಲಿರುವ ಮಹಾ ಪರಿಶುದ್ಧವಸ್ತುಗಳನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಕೆಹಾತ್ಯರು ಕೈಗೊಳ್ಳಬೇಕಾದ ಕರ್ತವ್ಯಗಳು ಇವು: ದೇವದರ್ಶನದ ಗುಡಾರದಲ್ಲಿ ಪರಮ ಪವಿತ್ರವಾದ ವಸ್ತುಗಳನ್ನು ಅವರು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವದರ್ಶನದ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವದಂದರೆ - ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ದೇವದರ್ಶನದ ಗುಡಾರದಲ್ಲಿ ಕೊಹಾತ್ಯರು ಮಾಡುವ ಸೇವೆ ಯಾವುದೆಂದರೆ, ದೇವದರ್ಶನ ಗುಡಾರದ ಅತಿಪರಿಶುದ್ಧವಾದ ವಸ್ತುಗಳನ್ನು ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:4
11 ತಿಳಿವುಗಳ ಹೋಲಿಕೆ  

ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರ ಬಂದಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನೆಂದರೆ, ಆರೋನನೂ ಅವನ ಪುತ್ರರೂ ಒಳಗೆ ಬಂದು, ಪ್ರತಿಯೊಬ್ಬ ಕೆಹಾತ್ಯನು ಮಾಡಬೇಕಾದ ಕೆಲಸವನ್ನು ಮತ್ತು ಹೊತ್ತುಕೊಂಡು ಹೋಗಬೇಕಾದದ್ದನ್ನು ತೋರಿಸಲಿ.


“ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ,


ದೇವದರ್ಶನಗುಡಾರದ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾದ ಗಂಡಸರನ್ನು ಲೆಕ್ಕಿಸು. ಅವರ ವಯಸ್ಸು ಮೂವತ್ತರಿಂದ ಮೊದಲುಗೊಂಡು ಐವತ್ತರೊಳಗಿರಬೇಕು.


“ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆಯಲ್ಲಿಯೂ ಗೇರ್ಷೋನ್ಯರು ಮಾಡತಕ್ಕ ಕೆಲಸ ಯಾವುದೆಂದರೆ:


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡಲು ಯೋಗ್ಯರಾದ ಮೂವತ್ತರಿಂದ ಐವತ್ತರೊಳಗಿನ ಎಲ್ಲಾ ಪುರುಷರನ್ನು ಲೆಕ್ಕಿಸು.


“ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರದೊಳಕ್ಕೆ ಹೋಗಿ, ಮಹಾ ಪವಿತ್ರ ಸ್ಥಳವನ್ನು ಮರೆಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು.


ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.


ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು.


ದಾವೀದನು ಲೇವಿಯರನ್ನು ಮೂರು ಗುಂಪುಗಳನ್ನಾಗಿ ಮಾಡಿದನು. ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು