Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:6 - ಪರಿಶುದ್ದ ಬೈಬಲ್‌

6 ಬಳಿಕ ಅವರು ಇವುಗಳಿಗೆಲ್ಲ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ನೀಲಿಬಟ್ಟೆಯನ್ನು ತೊಗಲಿನ ಮೇಲೆ ಹಾಸಿ ಪವಿತ್ರ ಪೆಟ್ಟಿಗೆಯ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದರ ಮೇಲೆ ಹಸನಾದ ತೊಗಲನ್ನು ಮತ್ತು ನೀಲಿ ಬಟ್ಟೆಯನ್ನು ಹೊದಿಸಬೇಕು. (ಮಂಜೂಷದ ಬಳೆಗಳಿಗೆ) ಹೊರುವ ಕೋಲುಗಳನ್ನು ಸಿಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರ ಮೇಲೆ ಕಡಲುಹಂದಿಯ ತೊಗಲನ್ನೂ ನೀಲಿಬಟ್ಟೆಯನ್ನೂ ಹೊದಿಸಿ [ಮಂಜೂಷದ ಬಳೆಗಳಲ್ಲಿ] ಹೊರುವ ಕೋಲುಗಳನ್ನು ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:6
11 ತಿಳಿವುಗಳ ಹೋಲಿಕೆ  

ತರುವಾಯ ಮೋಶೆಗೆ ಪವಿತ್ರಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ.


ಯಾಜಕರು ಯೆಹೋವನ ಪವಿತ್ರಸ್ಥಳದಲ್ಲಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ವಿಶೇಷ ಬಟ್ಟೆಗಳನ್ನು ಮಾಡುವುದಕ್ಕೆ ಕೆಲಸಗಾರರು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿದರು.


ಮತ್ತು ಪವಿತ್ರಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕ ಸೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು.


ಬಳಿಕ ಅವರು ವೇದಿಕೆಯಲ್ಲಿ ಆರಾಧನೆಗಾಗಿ ಉಪಯೋಗಿಸಲ್ಪಡುವ ಎಲ್ಲಾ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳು ಯಾವುವೆಂದರೆ, ಅಗ್ಗಿಷ್ಟಿಗೆಗಳು, ಮುಳ್ಳುಚಮಚಗಳು, ಸಲಿಕೆಗಳು ಮತ್ತು ಬೋಗುಣಿಗಳು. ಅವರು ಇವುಗಳನ್ನು ತಾಮ್ರದ ವೇದಿಕೆಯ ಮೇಲೆ ಇಡಬೇಕು. ಬಳಿಕ ಅವರು ಶ್ರೇಷ್ಠವಾದ ತೊಗಲಿನ ಹೊದಿಕೆಯನ್ನು ಇವುಗಳಿಗೆಲ್ಲ ಹೊದಿಸಿ, ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಲ್ಲಿ ಸೇರಿಸಬೇಕು.


ಅವರು ಪವಿತ್ರ ಗುಡಾರದ ಬಟ್ಟೆಗಳನ್ನು, ದೇವದರ್ಶನಗುಡಾರ ಮತ್ತು ಅದರ ಹೊದಿಕೆ, ಅದರ ಮೇಲಿರುವ ಶ್ರೇಷ್ಠವಾದ ತೊಗಲಿನ ಹೊದಿಕೆ ಮತ್ತು ದೇವದರ್ಶನಗುಡಾರದಲ್ಲಿರುವ ಪ್ರವೇಶದ್ವಾರದ ಪರದೆಯನ್ನು ವರ್ಗಾಯಿಸಬೇಕು.


ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.


“ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು