Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:2 - ಪರಿಶುದ್ದ ಬೈಬಲ್‌

2 “ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:2
15 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.


ಆ ವ್ಯಕ್ತಿಯು ತನಗೆ ರೋಗವಿರುವ ಕಾಲವೆಲ್ಲಾ ಅಶುದ್ಧನಾಗಿರುವನು. ಆ ವ್ಯಕ್ತಿಯು ಅಶುದ್ಧನಾಗಿದ್ದಾನೆ. ಅವನು ಒಂಟಿಯಾಗಿ ವಾಸಿಸಬೇಕು. ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.


ಅದಕ್ಕೆ ಯೆಹೋವನು, “ಆಕೆಯ ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳೆಯದೊಳಗೆ ಬರಬಹುದು” ಎಂದು ಉತ್ತರಿಸಿದನು.


ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.


ನಗರದ ಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು, “ನಾವು ಸಾಯುವುದನ್ನೇ ಕಾಯುತ್ತಾ ಕುಳಿತಿರುವುದೇಕೆ?


ಯಾಜಕನು ಪರೀಕ್ಷಿಸಿದಾಗ ಗುಳ್ಳೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.


“ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.


“ಈ ದಿನದಲ್ಲಿ ಯಾವನಾದರೂ ಉಪವಾಸ ಮಾಡದಿದ್ದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಮೇಘವು ಗುಡಾರದಿಂದ ಮೇಲಕ್ಕೆ ಎದ್ದಿತು. ಆರೋನನು ಹಿಂತಿರುಗಿ ಮಿರ್ಯಾಮಳನ್ನು ನೋಡಿದನು. ಆಕೆಯ ಚರ್ಮವು ಹಿಮದಂತೆ ಬೆಳ್ಳಗಾಗಿತ್ತು. ಆಕೆಗೆ ಭಯಂಕರವಾದ ಚರ್ಮರೋಗ ಹಿಡಿದಿತ್ತು.


“ಒಬ್ಬನಿಗೆ ಕುಷ್ಠರೋಗವಿದ್ದರೆ, ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು. ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು