Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:23 - ಪರಿಶುದ್ದ ಬೈಬಲ್‌

23 “ಯಾಜಕನು ಈ ಶಾಪಗಳನ್ನು ಒಂದು ಸುರುಳಿಯಲ್ಲಿ ಬರೆಯಬೇಕು. ಬಳಿಕ ಆ ಕಹಿ ನೀರಿನಿಂದ ಆ ಸುರುಳಿಯ ವಾಕ್ಯವನ್ನು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಬಳಿಕ ಯಾಜಕನು ಆ ಶಾಪವಚನಗಳನ್ನು ಒಂದು ಪತ್ರದಲ್ಲಿ ಬರೆದು ಆ ವಿಷಕರ ಜಲದಲ್ಲಿ ತೊಳೆಯಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಯಾಜಕನು ಆ ಶಾಪವಚನಗಳನ್ನು ಪತ್ರದಲ್ಲಿ ಬರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಇದಲ್ಲದೆ ಯಾಜಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ತೊಳೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:23
14 ತಿಳಿವುಗಳ ಹೋಲಿಕೆ  

ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ನನ್ನ ಪಾಪಗಳನ್ನು ನೋಡಬೇಡ! ಅವುಗಳನ್ನೆಲ್ಲ ಅಳಿಸಿಬಿಡು!


ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


“ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ!


ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.


“ಆದ್ದರಿಂದ ನೀನು ಈ ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಈ ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು.


ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.


ಆಮೇಲೆ ಶಾಪವನ್ನು ಬರಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಈ ನೀರು ಅವಳೊಳಗೆ ಸೇರುವುದು. ಅವಳು ದೋಷಿಯಾಗಿದ್ದರೆ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು