Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:15 - ಪರಿಶುದ್ದ ಬೈಬಲ್‌

15 ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ ಒಂದು ಬುಟ್ಟಿ ತುಂಬ ಎಣ್ಣೆಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡಬುಗಳು ಮತ್ತು ಮೇಲೆ ಹೇಳಿದ ಬಲಿಗಳ ಸಮೇತ ಕೊಡಬೇಕಾದ ಧಾನ್ಯದ್ರವ್ಯ-ಪಾನದ್ರವ್ಯಗಳು, ಇವುಗಳನ್ನೆಲ್ಲಾ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡುಬುಗಳು ಇವುಗಳನ್ನೂ ಮೇಲೆ ಕಂಡ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:15
15 ತಿಳಿವುಗಳ ಹೋಲಿಕೆ  

“ಒಬ್ಬನು ಒಲೆಯಲ್ಲಿ ಬೇಯಿಸಿದ ಧಾನ್ಯನೈವೇದ್ಯವನ್ನು ಅರ್ಪಿಸಿದರೆ, ಆಗ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯಾಗಲಿ ಅಥವಾ ಎಣ್ಣೆ ಹೊಯಿದು ಮಾಡಿದ ಕಡುಬುಗಳಾಗಲಿ ಆಗಿರಬೇಕು.


ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು.


ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ.


ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಕುಡಿಯುವಾಗಲೆಲ್ಲಾ ಪ್ರಭುವಿನ ಮರಣವನ್ನು ಆತನು ಬರುವ ತನಕ ಪ್ರಚುರಪಡಿಸುತ್ತೀರಿ.


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.


ಯಾಜಕರೇ, ಯೆಹೋವನ ಸೇವಕರೇ, ಗೋಳಾಡಿರಿ. ಯಾಕೆಂದರೆ ಇನ್ನು ಮುಂದೆ ಯೆಹೋವನ ಆಲಯದಲ್ಲಿ ಪಾನ ಮತ್ತು ಧಾನ್ಯಾರ್ಪಣೆ ಇರದು.


ಒಬ್ಬನು ಆಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.”


ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕೆಂದರೆ ಈ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.’”


“ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.


ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು ಮಾಡಿದ ಕಡುಬುಗಳನ್ನೂ ಎಣ್ಣೆಬೆರೆಸಿದ ಹೋಳಿಗೆಗಳನ್ನೂ ತರಬೇಕು.


“ಬಳಿಕ ಯಾಜಕನು ಇವುಗಳನ್ನು ಯೆಹೋವನ ಬಳಿಗೆ ತಂದು ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು