Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:2 - ಪರಿಶುದ್ದ ಬೈಬಲ್‌

2 “ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾದುದು ಇದು - ಯಾವ ಗಂಡಸೇ ಆಗಲಿ, ಹೆಂಗಸೇ ಆಗಲಿ ನಾಜೀರರ ವ್ರತವನ್ನು ಅಂದರೆ ಸರ್ವೇಶ್ವರನಿಗೆ ತನ್ನನ್ನೇ ಪ್ರತಿಷ್ಠಿಸಿಕೊಳ್ಳುವ ವಿಶೇಷ ವ್ರತವನ್ನು ಕೈಗೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:2
21 ತಿಳಿವುಗಳ ಹೋಲಿಕೆ  

ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.


ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.


ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.


ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”


ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.


ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು. ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.


ಕೊನೆಗೆ ಸಂಸೋನನು ದೆಲೀಲಳಿಗೆ ಎಲ್ಲವನ್ನು ಹೇಳಿದನು. “ನಾನೆಂದೂ ನನ್ನ ತಲೆಕೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಪ್ರತಿಷ್ಠಿಸಲಾಗಿತ್ತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು.


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು.


ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು ಮತ್ತು ನಾನು ಪರಿಶುದ್ಧನಾಗಿದ್ದೇನೆ.


ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.


ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡಬೇಡ.


ಆದರೆ ರೇಕಾಬ್ಯರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ. ಏಕೆಂದರೆ ನಮ್ಮ ಪೂರ್ವಿಕನಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವು ಮತ್ತು ನಿಮ್ಮ ಸಂತಾನದವರು ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬಾರದು.


“ಇನ್ನೂ ತನ್ನ ತಂದೆಯ ಮನೆಯಲ್ಲಿರುವ ಯುವತಿಯು ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿಕೊಂಡರೆ ಅಥವಾ ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ,


ಅವಳು ನಿಷಿದ್ಧವಾದ ಯಾವ ಆಹಾರವನ್ನೂ ತಿನ್ನಬಾರದು. ಹೀಗೆ ನಾನು ಅವಳಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು