Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:20 - ಪರಿಶುದ್ದ ಬೈಬಲ್‌

20 ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:20
24 ತಿಳಿವುಗಳ ಹೋಲಿಕೆ  

ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.


“ಯಾಜಕನು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯನ್ನು ಆಕೆಯ ಕೈಗಳಿಂದ ತೆಗೆದುಕೊಂಡು ಅದನ್ನು ಯೆಹೋವನ ಮುಂದೆ ಪ್ರತಿಷ್ಠಿಸಿ, ಬಳಿಕ ಅದನ್ನು ವೇದಿಕೆಯ ಮೇಲೆ ಅರ್ಪಿಸಬೇಕು.


ಯೇಸು ಹುಳಿರಸವನ್ನು ರುಚಿನೋಡಿ, “ತೀರಿತು” ಎಂದು ಹೇಳಿ ತಲೆಬಾಗಿ ಪ್ರಾಣಬಿಟ್ಟನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೆ ಇದನ್ನು ಕುಡಿಯುವುದೇ ಇಲ್ಲ” ಎಂದನು.


ನಾನು ನನ್ನ ತಂದೆಯ ರಾಜ್ಯದಲ್ಲಿ ಮತ್ತೆ ಒಟ್ಟಾಗಿ ಸೇರಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ತನಕ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ ಜನರಿಗೆ ಕುಡಿಯಲು ಕೊಟ್ಟನು.


ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು.


ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.


ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.


ಆದರೆ ಅವುಗಳ ಮಾಂಸದಲ್ಲಿ ನಿವಾಳಿಸಲ್ಪಡುವ ಕಾಣಿಕೆಯಂತೆ ಎದೆಯ ಭಾಗ ಮತ್ತು ಬಲತೊಡೆ ನಿಮ್ಮದಾಗಿವೆ.


ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಬ್ಬತ್ತಾದ ನಂತರ ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು.


ಜನರು ಪ್ರಾಣಿಗಳ ಕೊಬ್ಬನ್ನು ಅಗ್ನಿಯ ಮೂಲಕ ಹೋಮಮಾಡುವಾಗ, ಯಾಜಕರಿಗಾಗಿ ತೆಗೆದಿಟ್ಟ ತೊಡೆಯ ಭಾಗವನ್ನು ಮತ್ತು ನೈವೇದ್ಯವಾಗಿ ನಿವಾಳಿಸಬೇಕಾದ ಎದೆಯ ಭಾಗವನ್ನು ಯೆಹೋವನ ಸನ್ನಿಧಿಗೆ ತರಬೇಕು. ಅದು ನಿಮ್ಮ ಪಾಲಾಗಿರುವುದು. ಅದು ನಿನಗೂ ನಿನ್ನ ಮಕ್ಕಳಿಗೂ ಸೇರಿದ್ದು. ಯೆಹೋವನು ಆಜ್ಞಾಪಿಸಿದಂತೆ ಯಜ್ಞಗಳ ಆ ಭಾಗವು ಎಂದೆಂದೂ ನಿಮ್ಮ ಪಾಲಾಗಿರುತ್ತದೆ” ಎಂದು ಹೇಳಿದನು.


ಮೋಶೆ ಆಜ್ಞಾಪಿಸಿದಂತೆ ಎದೆಯ ಭಾಗಗಳನ್ನು ಮತ್ತು ಬಲ ತೊಡೆಯನ್ನು ಆರೋನನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ನೈವೇದ್ಯರೂಪವಾಗಿ ನಿವಾಳಿಸುವ ಸಮರ್ಪಣೆಯಲ್ಲಿ ಪಶುವಿನ ಎದೆಯ ಭಾಗವನ್ನು ಮತ್ತು ಸಮಾಧಾನಯಜ್ಞಗಳಲ್ಲಿ ಪಶುವಿನ ಬಲ ತೊಡೆಯನ್ನು ಯೆಹೋವನಾದ ನಾನು ಇಸ್ರೇಲರಿಂದ ತೆಗೆದುಕೊಂಡು ಆರೋನನಿಗೂ ಅವನ ಪುತ್ರರಿಗೂ ಕೊಡುತ್ತಿದ್ದೇನೆ. ಇಸ್ರೇಲರು ಈ ನಿಯಮಕ್ಕೆ ಎಂದೆಂದಿಗೂ ವಿಧೇಯರಾಗಬೇಕು.”


ಬಳಿಕ ಯಾಜಕನು ವೇದಿಕೆಯ ಮೇಲೆ ಕೊಬ್ಬನ್ನು ಹೋಮಮಾಡಬೇಕು. ಆದರೆ ಪಶುವಿನ ಎದೆಯ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿದೆ.


ಕಾಣಿಕೆಯ ಆ ಭಾಗವು ಅಗ್ನಿಯಲ್ಲಿ ಹೋಮಮಾಡಬೇಕು. ಅವನು ಕಾಣಿಕೆಯನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಗೆ ಹೋಗಬೇಕು. ಅವನು ಆ ಪಶುವಿನ ಕೊಬ್ಬನ್ನೂ ಎದೆಯ ಭಾಗವನ್ನೂ ಯಾಜಕನ ಬಳಿಗೆ ತರಬೇಕು. ಯೆಹೋವನ ಸನ್ನಿಧಿಯಲ್ಲಿ ಎದೆಯ ಭಾಗವು ನಿವಾಳಿಸಲ್ಪಡಬೇಕು. ಇದು ನೈವೇದ್ಯ ಸಮರ್ಪಣೆಯಾಗಿರುವುದು.


ನೀವು ಸಮಾಧಾನಯಜ್ಞದ ಪಶುವಿನ ಬಲತೊಡೆಯನ್ನು ಸಹ ಯಾಜಕನಿಗೆ ಕೊಡಬೇಕು.


“ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತ ಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಮೀರಿ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು